
ಆನೇಕಲ್ : ಜೈಲಿನಲ್ಲಿರುವ ಶಶಿಕಲಾ ಪತಿಗೆ ತೀವ್ರ ಅನಾರೋಗ್ಯ ಕಾಡಿದ ಹಿನ್ನೆಲೆಯಲ್ಲಿ ಶಶಿಕಲಾ ಪೆರೋಲ್’ಗೆ ಅರ್ಜಿ ಹಾಕುವ ಸಾಧ್ಯತೆ ಹೆಚ್ಚಿದೆ. ಗಂಡನ ಅನಾರೋಗ್ಯ ಹಿನ್ನೆಲೆಯಲ್ಲಿ ಜೈಲಿನ ಅಧಿಕಾರಿಗಳಿಗೆ ಮನವಿ ಮಾಡಿದ್ದು, ಇಂದು ತಮಿಳುನಾಡಿನ ವಕೀಲರು ಕೇಂದ್ರ ಕಾರಾಗೃಹಕ್ಕೆ ಭೇಟಿ ಕೊಡುವ ಸಾಧ್ಯತೆ ಇದೆ.
ಶಶಿಕಲಾ ಪತಿ ನಟರಾಜನ್ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕಿಡ್ನಿ ವೈಫಲ್ಯಕ್ಕೆ ಒಳಗಾಗಿರುವ ನಟರಾಜನ್ ಸ್ಥಿತಿ ಇದೀಗ ಗಂಭೀರವಾಗಿದೆ.
ಈ ನಿಟ್ಟಿನಲ್ಲಿ ಶಶಿಕಲಾ ಪೆರೋಲ್’ಗೆ ಅರ್ಜಿ ಹಾಕುವ ಸಾಧ್ಯತೆಗಳಿವೆ ಎನ್ನಲಾಗಿದೆ. ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡರುವ ಕೇಂದ್ರ ಕಾರಾಗೃಹ ಇಲಾಖೆ ಅಧೀಕ್ಷರಾದ ಸೋಮಶೇಖರ್ ಅವರು ಇದುವರೆಗೂ ಯಾವುದೇ ಪತ್ರ ಬಂದಿಲ್ಲ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.