ಕಣ್ಣು ಬಿಡುವ ಮುನ್ನವೇ ಕಣ್ಣು ಮುಚ್ಚುತ್ತಿವೆ ಕಂದಮ್ಮಗಳು: ಆರೋಗ್ಯ ಇಲಾಖೆಯಿಂದ ಆಘಾತಕಾರಿ ವರದಿ ಬಹಿರಂಗ

By Suvarna Web DeskFirst Published Sep 20, 2017, 8:47 AM IST
Highlights

ಇತ್ತೀಚೆಗೆ ಕೆಲ ರಾಜ್ಯಗಳಲ್ಲಿ ಶಿಶುಗಳ ಸಾವಿನ ಪ್ರಮಾಣ ಮಿತಿ ಮೀರಿದೆ. ಇಂತಹ ಸಂದರ್ಭದಲ್ಲೇ ನಮ್ಮ ರಾಜ್ಯದ ಗಡಿ ಜಿಲ್ಲೆ ಬೀದರ್​ನಲ್ಲಿ ಕಳೆದ 4 ತಿಂಗಳಿನಲ್ಲಿ ಸುಮಾರು 200 ಕ್ಕೂ ಹೆಚ್ಚು ಮಕ್ಕಳ ಸಾವು ಸಂಭವಿಸಿದೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

ಬೀದರ್(ಸೆ.20): ಇತ್ತೀಚೆಗೆ ಕೆಲ ರಾಜ್ಯಗಳಲ್ಲಿ ಶಿಶುಗಳ ಸಾವಿನ ಪ್ರಮಾಣ ಮಿತಿ ಮೀರಿದೆ. ಇಂತಹ ಸಂದರ್ಭದಲ್ಲೇ ನಮ್ಮ ರಾಜ್ಯದ ಗಡಿ ಜಿಲ್ಲೆ ಬೀದರ್​ನಲ್ಲಿ ಕಳೆದ 4 ತಿಂಗಳಿನಲ್ಲಿ ಸುಮಾರು 200 ಕ್ಕೂ ಹೆಚ್ಚು ಮಕ್ಕಳ ಸಾವು ಸಂಭವಿಸಿದೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

ಇದು ಸ್ವಲ್ಪ ಶಾಕಿಂಗ್ ಆದ್ರೂ ಸಹ, ಸತ್ಯ ಸಂಗತಿ. ಸುಮಾರು 137 ಮಕ್ಕಳು ಭೂಮಿಗೆ ಬಂದ ಮೇಲೆ ಸಾವನ್ನಪ್ಪಿದ್ರೆ, 72 ಕ್ಕೂ ಹೆಚ್ಚು ಮಕ್ಕಳು ತಾಯಿ ಹೊಟ್ಟೆಯಲ್ಲೇ ಕೊನೆಯುಸಿರೆಳೆದಿವೆ. ಇದಕ್ಕೆ ಬಹು ಮುಖ್ಯ ಕಾರಣ ಅಂದ್ರೆ ಅಪೌಷ್ಠಿಕತೆ ಅಂತ ಹೇಳಲಾಗ್ತಿದೆ. ಇನ್ನೂ ಕೆಲ ಶಿಶುಗಳು ವೈದ್ಯಕೀಯ ಸೌಲಭ್ಯ ಸಿಗದೆ ಮೃತಪಟ್ಟಿವೆ ಎಂಬ ಮಾತು ಸಹ ಕೇಳಿ ಬಂದಿದೆ.

ಬೀದರ್ ಜಿಲ್ಲೆಯಲ್ಲಿ ಸುಮಾರು 625 ಹಳ್ಳಿಗಳಿದ್ದು, ಎಷ್ಟೋ ಹಳ್ಳಿಗಳಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಸಿಬ್ಬಂದಿ ಹಾಗೂ ಅಧಿಕಾರಿಗಳು ಭೇಟಿ ಸಹ ನೀಡಿಲ್ಲ. ಹೀಗೆ ಕಾಟಾಚಾರಕ್ಕೆ ಕರ್ತವ್ಯ ನಿರ್ವಹಿಸುತ್ತಿರೋದ್ರಿಂದ ಈ ಬಾರೀ ದುರಂತ ಸಂಭವಿಸುತ್ತಿದೆ ಅಂತ ಕೆಲ ಹೋರಾಟಗಾರರು ಹೇಳ್ತಿದ್ದಾರೆ.

ಅಪೌಷ್ಟಿಕತೆ ನಿವಾರಣೆಗೆ ಅಂತಾನೆ ಸರ್ಕಾರ ಲಕ್ಷಾಂತರ ರೂಪಾಯಿ ಹಣ ಖರ್ಚು ಮಾಡುತ್ತಿದೆ. ಆದ್ರೆ ಈ ಹಣವೆಲ್ಲಾ ಭ್ರಷ್ಟ ಗುತ್ತಿಗೆದಾರ ಹಾಗೂ ಅಧಿಕಾರಿಗಳ ಜೇಬು ಸೇರುತ್ತಿರೋದ್ರಿಂದ ಶಿಶುಗಳ ಸಾವಿನ ಸರಣಿ ನಡೆಯುತ್ತಿದೆ ಅಂತ ಸ್ಥಳಿಯರು ಹೇಳ್ತಿದ್ದಾರೆ.

 

click me!