ಪೊಲೀಸರಂತೆ ಸಾರಿಗೆ ನೌಕರರಿಗೂ ವಿಮೆ

Published : Jun 05, 2019, 10:25 AM IST
ಪೊಲೀಸರಂತೆ ಸಾರಿಗೆ  ನೌಕರರಿಗೂ ವಿಮೆ

ಸಾರಾಂಶ

ಪೊಲೀಸರಂತೆ ಸಾರಿಗೆ ನೌಕರರಿಗೂ ವಿಮೆ |  ಆರೋಗ್ಯ ಭಾಗ್ಯ ಯೋಜನೆ ವಿಸ್ತರಣೆ: ತಮ್ಮಣ್ಣ |   

ಬೆಂಗಳೂರು (ಜೂ. 05):  ಪೊಲೀಸ್‌ ಇಲಾಖೆಗೆ ನೀಡಿರುವಂತೆ ಸಾರಿಗೆ ಇಲಾಖೆ ನೌಕರರಿಗೂ ಆರೋಗ್ಯ ಭಾಗ್ಯ ಯೋಜನೆಯನ್ನು ವಿಸ್ತರಿಸುವುದಾಗಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಭರವಸೆ ನೀಡಿದ್ದಾರೆ.

ಬಿಎಂಟಿಸಿ ಪರಿಶಿಷ್ಟಜಾತಿ ಹಾಗೂ ಪಂಗಡದ ನೌಕರರ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕೇಂದ್ರ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಡಾ.ಅಂಬೇಡ್ಕರ್‌ ಅವರ 128ನೇ ಜಯಂತ್ಯುತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಇದುವರೆಗೂ ಪೊಲೀಸ್‌ ಇಲಾಖೆ ಸಿಬ್ಬಂದಿಗೆ ಮಾತ್ರ ಆರೋಗ್ಯ ಭಾಗ್ಯ ಯೋಜನೆ ಇತ್ತು. ಅದನ್ನು ಸಾರಿಗೆ ನೌಕರರಿಗೂ ಕೊಡಬೇಕು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಬೇಡಿಕೆ ಕೊಟ್ಟಿದ್ದೇವೆ. ಸಕಾರಾತ್ಮಕವಾಗಿ ಅವರು ಸ್ಪಂದಿಸಲಿದ್ದಾರೆ.

ಜತೆಗೆ ಸಿಎಸ್‌ಆರ್‌ ಫಂಡ್‌ನಲ್ಲಿ 50 ಕೋಟಿ ರು.ಗಳನ್ನು ತಲಾ 25 ಕೋಟಿ ರು.ಗಳಂತೆ ಕಿದ್ವಾಯಿ ಮತ್ತು ಜಯದೇವ ಆಸ್ಪತ್ರೆಗೆ ಸರ್ಕಾರ ಕೊಡುತ್ತಿದ್ದು, ಆ ಹಣವನ್ನು ಠೇವಣಿಯಾಗಿ ಇಟ್ಟುಕೊಳ್ಳಬೇಕು. ಬಡ್ಡಿ ಹಣದಲ್ಲಿ ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡುವ ‘ಸಿ’ ಮತ್ತು ‘ಡಿ’ ಗ್ರೂಪ್‌ ನೌಕರರು ಮತ್ತು ಕುಟುಂಬದವರಿಗೆ ಹೃದಯ, ಕ್ಯಾನ್ಸರ್‌ ಕಾಯಿಲೆಗೆ ಉಚಿತವಾಗಿ ಚಿಕಿತ್ಸೆ ನೀಡಬೇಕಂಬ ಉದ್ದೇಶವಿದೆ. ಈ ಠೇವಣಿಯನ್ನು ಈ ಒಟ್ಟು 100 ಕೋಟಿ ರು.ಗಳಿಗೆ ಹೆಚ್ಚಿಸಲು ಉದ್ದೇಶಿಸಲಾಗಿದೆ ಎಂದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Actress Assault Case: ಆರು ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ ಘೋಷಿಸಿದ ಕೇರಳ ಕೋರ್ಟ್‌
ಹುನುಗುಂದದಲ್ಲಿ ಮಂಕಿ ಕ್ಯಾಪ್ ಗ್ಯಾಂಗ್: ಒಂದೇ ರಾತ್ರಿ, 9 ಮನೆ ಕಳವು, ಪೋಲಿಸರ ಮನೆಗಳನ್ನೇ ಬಿಡದ ಖದೀಮರು!