ರೆಡ್ಡಿಗಿಲ್ಲ ರಿಲೀಫ್! ಮುಂದುವರಿದ ಬಂಧನದ ಭೀತಿ

Published : Nov 09, 2018, 04:59 PM ISTUpdated : Nov 09, 2018, 05:03 PM IST
ರೆಡ್ಡಿಗಿಲ್ಲ ರಿಲೀಫ್! ಮುಂದುವರಿದ ಬಂಧನದ ಭೀತಿ

ಸಾರಾಂಶ

‘ಡೀಲ್’ ಮಾಡಿ ಬಂಧನದ ಭೀತಿ ಎದುರಿಸುತ್ತಿರುವ ಪ್ರಭಾವಿ ರಾಜಕಾರಣಿ ಜನಾರ್ದನ ರೆಡ್ಡಿ | ತಲೆಮರೆಸಿಕೊಂಡಿರುವ ರೆಡ್ಡಿಯಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ  

ಬೆಂಗಳೂರು: ಪ್ರಕರಣವೊಂದನ್ನು ಮುಚ್ಚಿಹಾಕಲು ತನಿಖಾಸಂಸ್ಥೆ ಜೊತೆ ಡೀಲ್ ಮಾಡಲು ಹೋಗಿ ಬಂಧನದ ಭೀತಿ ಎದುರಿಸುತ್ತಿರುವ ಪ್ರಭಾವಿ ರಾಜಕಾರಣಿ ಜನಾರ್ದನ ರೆಡ್ಡಿಯ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ.

ರೆಡ್ಡಿ ಪರ ವಕೀಲ ಸಿ.ಎಚ್.ಹನುಮಂತರಾಯ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಅರ್ಜಿಯನ್ನು ಸೋಮವಾರಕ್ಕೆ ಮುಂದೂಡಿದ್ದಾರೆ.

ಇದನ್ನೂ ಓದಿ: ಜನಾರ್ದನ ರೆಡ್ಡಿ ತಲೆಮರೆಸಿಕೊಂಡಿದ್ದೇಕೆ? ವಕೀಲ ಬಿಚ್ಚಿಟ್ರು ಕಾರಣ

ಅರ್ಜಿ ಮುಂದೂಡಲ್ಪಟ ಹಿನ್ನೆಲೆಯಲ್ಲಿ ಜನಾರ್ಧನ ರೆಡ್ಡಿಗೆ ಬಂಧನದ ಭೀತಿ ಮುಂದುವರೆದಿದೆ. 

ಆ್ಯಂಬಿಡೆಂಟ್ ಕಂಪನಿಯ ಡೀಲ್ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ, ಇದೀಗ ತಲೆಮರೆಸಿಕೊಂಡಿದ್ದು ಸಿಸಿಬಿ ಪೊಲೀಸರು ಪತ್ತೆಗಾಗಿ ಬಲೆ ಬೀಸಿದ್ದಾರೆ.  ವಿಚಾರಣೆಗಾಗಿ ಹಾಜರಾಗುವಂತೆ ಸಿಸಿಬಿ ನೊಟೀಸ್ ಕೂಡಾ ಜಾರಿಮಾಡಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೈತರ ಯೂರಿಯಾ ಕದ್ದು ತಮಿಳ್ನಾಡಿಗೆ ಸಾಗಣೆ ದಂಧೆ ಪತ್ತೆ
ಗೃಹಲಕ್ಷ್ಮಿ ಸ್ಕೀಂ ₹5000 ಕೋಟಿ ಹಗರಣ: ಬಿಜೆಪಿ