
ಬೆಂಗಳೂರು(ಸೆ.23): ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ ಕುಮಾರಸ್ವಾಮಿಗೆ ಇಂದು ಹೃದಯದ ಶಸ್ತ್ರಚಿಕಿತ್ಸೆ ನಡೆಯಲಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಕುಮಾರಸ್ವಾಮಿಗೆ ನಿನ್ನೆ ಶಸ್ತ್ರಚಿಕಿತ್ಸೆ ಪೂರ್ವ ಪರೀಕ್ಷೆ ನಡೆಸಲಾಗಿದೆ.
ಇಂದು ಬೆಳಿಗ್ಗೆ ಎಂಟು ಗಂಟೆಗೆ ಕುಮಾರಸ್ವಾಮಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಡಾ ಸತ್ಯಕಿ ಅವರ ನೇತೃತ್ವದ ತಂಡ ಶಸ್ತ್ರಚಿಕಿತ್ಸೆ ಮಾಡಲಿದೆ. ಹತ್ತು ವರ್ಷಗಳ ಮುಂಚೆ ಅಳವಡಿಸಲಾಗಿದ್ದ ಟಿಶ್ಯೂವಾಲ್ವ್ ಅನ್ನು ಬದಲಾಯಿಸಲು ವೈದ್ಯರು ಸೂಚಿಸಿರುವ ಹಿನ್ನಲೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತಿದೆ. ಕುಮಾರಸ್ವಾಮಿಯವರನ್ನು ನೋಡಲು ಅಭಿಮಾನಿಗಳು, ಕಾರ್ಯಕರ್ತರು, ಹಾಗೂ ಮಾದ್ಯಮದವರೆಲ್ಲರಿಗೂ ನಿರ್ಬಂಧ ವಿಧಿಸಲಾಗಿದೆ.
ಶಸ್ತ್ರ ಚಿಕಿತ್ಸೆಯ ನಂತರ ಮೂರು ದಿನಗಳ ಕಾಲ ಆಸ್ಪತ್ರೆಯಲ್ಲಿಯೇ ವಿಶ್ರಾಂತಿ ಪಡೆಯಲಿರುವ ಕುಮಾರಸ್ವಾಮಿ ನಂತರ ಮನೆಗೆ ತೆರಳಲಿದ್ದಾರೆ ಅಂತಾ ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.