
ಜಮ್ಮು(ಅ.29): ಭಾರತೀಯ ಸೇನಾ ಪಡೆ ಗಡಿ ನಿಯಂತ್ರಣ ರೇಖೆಯ ಕೇರನ್ ವಿಭಾಗದಲ್ಲಿ ಪಾಕ್'ನ ನಾಲ್ಕು ಸೇನಾ ಶಿಬಿರಗಳ ಮೇಲೆ ದಾಳಿ ನಡೆಸಿದ್ದು ಪಾಕ್'ನ ಹಲವು ಮಂದಿ ಯೋಧರು ಮೃತಪಟ್ಟಿರುವ ಸಾಧ್ಯತೆಯಿದೆ. ಇದನ್ನು ಭಾರತೀಯ ಸೇನೆಯೇ ಸ್ಪಷ್ಟಪಡಿಸಿದೆ.
ಜಮ್ಮು ಮತ್ತು ಕಾಶ್ಮೀರದ ಆರ್'ಎಸ್ ಪುರದ ಮೇಲೆ ಪಾಕಿಸ್ತಾನದ ಯೋಧರು ಕದನ ವಿರಾಮ ಉಲ್ಲಂಘನೆ ಮಾಡಿದ ಪರಿಣಾಮ ಸೇನೆ ಪ್ರತಿಯಾಗಿ ದಾಳಿ ನಡೆಸಿದೆ.
ಕಳೆದ ಶುಕ್ರವಾರ ಭಾರತೀಯ ಪಡೆ ಕದನ ವಿರಾಮವನ್ನು ಉಲ್ಲಂಘಿಸಿದ ಪರಿಣಾಮ 15 ಪಾಕ್ ಯೋದರನ್ನು ಕೊಂದಿತ್ತು. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸಹ ಇಂದು ' ಭಾರತೀಯ ಸೇನೆ ಅಪ್ರಚೋದಕ ದಾಳಿಗೆ ತಕ್ಕ ಉತ್ತರ ನೀಡುತ್ತದೆ ಪಾಕ್'ಗೆ ಖಡಕ್ ಎಚ್ಚರಿಕೆ ನೀಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.