ರಾಜ್ಯದಲ್ಲಿ ಮುಂದುವರಿದ ಭಾರಿ ಮಳೆ : ಸಂಪರ್ಕ ಕಡಿದುಕೊಂಡ 6 ಸೇತುವೆ

Published : Jul 08, 2019, 10:30 AM IST
ರಾಜ್ಯದಲ್ಲಿ ಮುಂದುವರಿದ ಭಾರಿ ಮಳೆ : ಸಂಪರ್ಕ ಕಡಿದುಕೊಂಡ 6 ಸೇತುವೆ

ಸಾರಾಂಶ

ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆ ಮುಂದುವರಿದಿದೆ. ಮಲೆನಾಡು ಹಾಗೂ ಕರಾವಳಿ ಪ್ರದೇಶಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವರುಣ ಅಬ್ಬರಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದ 6 ಸೇತುವೆಗಳು ಸಂಪರ್ಕ ಕಡಿದುಕೊಂಡಿವೆ. 

ಬೆಂಗಳೂರು [ಜು.08]: ಮಲೆನಾಡು, ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ  ಮಳೆ ಮುಂದುವರಿದಿದೆ. ಬೆಳಗಾವಿ ಜಿಲ್ಲೆಯಲ್ಲಿ ಅಬ್ಬರದ ಮಳೆಯಾಗಿದ್ದು, ಅನೇಕ ಕಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ. ನದಿಗಳು ಉಕ್ಕಿ ಹರಿಯುತ್ತಿವೆ. ನೆರೆಯ ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಚಿಕ್ಕೋಡಿ ತಾಲೂಕಿನಲ್ಲಿ ಕೃಷ್ಣಾ ಮತ್ತು ಉಪ ನದಿಗಳಿಗೆ ಹರಿದು ಬರುವ ನೀರಿನ ಪ್ರಮಾಣ ಹೆಚ್ಚಳವಾಗಿ 6 ಸೇತುವೆಗಳು ಸಂಪರ್ಕ ಕಡಿದುಕೊಂಡಿವೆ.

ಚಿಕ್ಕಮಗಳೂರಿನಲ್ಲೂ ಮಳೆ ಮುಂದುವರಿದಿದೆ. ಕಳೆದ ಎರಡು ದಿನಗಳಿಗೆ ಹೋಲಿಕೆ ಮಾಡಿದರೆ ಪ್ರಮಾಣ ಇಳಿಮುಖವಾಗಿದ್ದರಿಂದ ತುಂಗಾ, ಭದ್ರಾ ನದಿಗಳ ನೀರಿನ ಮಟ್ಟ ಇಳಿಮುಖವಾಗಿದೆ. ಶಿವಮೊಗ್ಗ, ತೀರ್ಥಹಳ್ಳಿ, ಸಾಗರ, ಹೊಸನಗರದಲ್ಲಿ ಸಣ್ಣ ಪ್ರಮಾಣದಲ್ಲಿ  ಮಳೆಯಾಗಿದೆ. 

ಕೊಡಗು, ಗದಗ, ಹುಬ್ಬಳ್ಳಿ-ಧಾರವಾಡ ಜಿಲ್ಲಾದ್ಯಂತ ಆಗಾಗ್ಗೆ ತುಂತುರು ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಬಳ್ಳಾರಿ ಜಿಲ್ಲೆಯ ಬಳ್ಳಾರಿ ನಗರ, ಹೂವಿನಹಡಗಲಿಯಲ್ಲಿ ಉತ್ತಮ ಮಳೆಯಾಗಿದೆ. ಕಂಪ್ಲಿಯಲ್ಲಿ ಬಿರುಗಾಳಿ ಸಹಿತ ತುಂತುರು ಮಳೆಯಾಗಿದೆ. ಹರಪನಹಳ್ಳಿಯಲ್ಲೂ ತುಂತುರು ಮಳೆಯಾಗಿದೆ. ಹಾವೇರಿ ಜಿಲ್ಲೆಯಾದ್ಯಂತ ತುಂತುರು ಮಳೆಯಾಗಿದೆ. ಕೊಪ್ಪಳ ಜಿಲ್ಲೆಯಲ್ಲೂ ಕೆಲವೆಡೆ ತುಂತುರು ಮಳೆಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!