ಮಳೆಗೆ ಮುಳುಗಿದ ಬೆಂಗಳೂರು,ವಿಧಾನಸೌಧದಲ್ಲೂ ಅವಾಂತರ:ಮೈಸೂರಿನಲ್ಲಿ ಸಿಡಿಲಿಗೆ 6 ಬಲಿ

Published : Oct 05, 2017, 03:52 PM ISTUpdated : Apr 11, 2018, 12:44 PM IST
ಮಳೆಗೆ ಮುಳುಗಿದ ಬೆಂಗಳೂರು,ವಿಧಾನಸೌಧದಲ್ಲೂ ಅವಾಂತರ:ಮೈಸೂರಿನಲ್ಲಿ ಸಿಡಿಲಿಗೆ 6 ಬಲಿ

ಸಾರಾಂಶ

ವಿಧಾನಸೌಧದಲ್ಲಿ ನಡೆಯಬೇಕಿದ್ದ ವಾಲ್ಮಿಕಿ ಜಯಂತಿ ಮಳೆಯಿಂದಾಗಿ ರದ್ದುಗೊಂಡಿದೆ. ಕಾರ್ಯಕ್ರಮಕ್ಕೆ ಆಗಮಿಸದ ಸಾರ್ವಜನಿಕರು ದಿಕ್ಕಾಪಾಲಾಗಿದ್ದಾರೆ.

ಬೆಂಗಳೂರು/ಮೈಸೂರು(ಅ.05): ಮಧ್ಯಾಹ್ನ ಸಿಲಿಕಾನ್ ಸಿಟಿಯಲ್ಲಿ ಸುರಿದ ಭಾರಿ ಮಳೆಗೆ ಹಲವು ಬಡಾವಣೆಗಳು ಜಲಾವೃತಗೊಂಡಿವೆ.

ವಿಧಾನಸೌಧ, ಶಿವಾನಂದ ವೃತ್ತ, ವಿಜಯನಗರ, ಮಾಗಡಿ ರಸ್ತೆ, ಮೆಜಸ್ಟಿಕ್, ಯಶವಂತಪುರ, ರಾಜಾಜಿನಗರ, ಕೋರಮಂಗಲ,ನಾಗರಬಾವಿ,ಬಿಟಿಎಂ ಬಡಾವಣೆ, ಹೆಚ್.ಎಸ್.ಆರ್ ಬಡಾವಣೆ, ಕೆಂಗೇರಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರಿ ಮಳೆ ಸುರಿದು ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನೀರು ನುಗ್ಗಿದೆ.ವಿಧಾನಸೌಧದಲ್ಲಿ ನಡೆಯಬೇಕಿದ್ದ ವಾಲ್ಮಿಕಿ ಜಯಂತಿ ಮಳೆಯಿಂದಾಗಿ ಕೆಲಕಾಲ ಸ್ಥಗಿತಗೊಂಡಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದ ಸಾರ್ವಜನಿಕರು ದಿಕ್ಕಾಪಾಲಾಗಿದ್ದು, ರಕ್ಷಣೆಗಾಗಿ  ಕುರ್ಚಿ, ಬ್ಯಾನರ್'ಗಳ ಮೋರೆ ಹೋದ ಸನ್ನಿವೇಶ ನಿರ್ಮಾಣವಾಗಿತ್ತು.

ಮೈಸೂರಿನಲ್ಲಿ ಸಿಡಿಲು ಬಡಿದು 6 ದುರ್ಮರಣ

ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ನಂದಿನಾಥಪುರ ಗ್ರಾಮದಲ್ಲಿ ಸಿಡಿಲು ಬಡಿದು ಒಂದೇ ಕುಟುಂಬದ 6 ಮಂದಿ ಸಾವೀಗೀಡಾಗಿದ್ದಾರೆ. ಸುಜಯ್(18) , ಸುವರ್ಣಮ್ಮ(45), ಪುಟ್ಟಣ್ಣ(60) ಹಾಗೂ ಉಳಿದ ಮೂವರ ಹೆಸರು ತಿಳಿದು ಬಂದಿಲ್ಲ. ಪಿರಿಯಾಪಟ್ಟಣ ತಾಲೂಕಿನ ಹುಣಸವಾಡಿ ಗ್ರಾಮದ ನಿವಾಸಿಗಳಾದ ಇವರು ಮಳೆಯಿಂದ ರಕ್ಷಣೆ ಪಡೆಯುವ ಸಲುವಾಗಿ ದೇವಸ್ಥಾನದಲ್ಲಿ ಆಶ್ರಯ ಪಡೆದಿದ್ದರು. ಆದರೆ ಸಿಡಿಲು ಬಡಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ ಡಿಸಿ ಟಾರ್ಗೆಟ್; ಎಂಇಎಸ್ ಪರ ನಿಂತು ಲೋಕಸಭೆ ಸ್ಪೀಕರ್‌ಗೆ ದೂರು ನೀಡಿದ ಮಹಾರಾಷ್ಟ್ರದ ಸಂಸದ ಮಾನೆ!
ಹಿಂದೂಗಳಿಗಿಂತ ಮುಸ್ಲಿಮರ ಮೇಲೆ ಹೆಚ್ಚು ಬಾಂಡ್: ಎಸ್‌ಡಿಪಿಐ ಆರೋಪಕ್ಕೆ ಅಂಕಿ-ಅಂಶ ಸಮೇತ ಕಮಿಷನರ್ ತಿರುಗೇಟು!