ಅಂಕೋಲಾದಲ್ಲಿ ಭಾರೀ ಮಳೆ, ನೆರೆ

Published : Oct 11, 2016, 05:01 AM ISTUpdated : Apr 11, 2018, 01:11 PM IST
ಅಂಕೋಲಾದಲ್ಲಿ ಭಾರೀ ಮಳೆ, ನೆರೆ

ಸಾರಾಂಶ

ನೆರೆ ಉಂಟಾದ ಪ್ರದೇಶಕ್ಕೆ ಅಂಕೋಲಾ ತಹಶೀಲ್ದಾರ ಭೇಟಿ ನೀಡಿ ಜನರನ್ನು ಸ್ಥಳಾಂತರಿಸುವ ಕಾರ್ಯ ಮಾಡುತ್ತಿದ್ದಾರೆ.

ಕಾರವಾರ (ಅ.11): ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶದಲ್ಲಿ ನಿನ್ನೆ ರಾತ್ರಿಯಿಡಿ ಸುರಿದ ಭಾರೀ ಮಳೆಯಿಂದಾಗಿ ಅಂಕೋಲಾ ತಾಲೂಕಿನ ಕೆಲವು ಗ್ರಾಮಗಳು ಜಲಾವೃತವಾಗಿದೆ.

ಅಂಕೋಲಾ ತಾಲೂಕಿನ ಕೇಣಿ, ಕೇಣಿಯ ಗಾಂವಕರವಾಡಾ, ಬಡಗೇರಿ ಗ್ರಾಮದ 15ಕ್ಕೂ ಹೆಚ್ಚು ಮನೆಗಳಿಗೆ ನೀರು ಆವರಿಸಿಕೊಂಡಿದೆ.

ಜನರನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸಲಾಗಿದೆ. ಕೇಣಿ ಹಳ್ಳ ತುಂಬಿ ಹರಿಯುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ. ನೆರೆ ಉಂಟಾದ ಪ್ರದೇಶಕ್ಕೆ ಅಂಕೋಲಾ ತಹಶೀಲ್ದಾರ ಭೇಟಿ ನೀಡಿ ಜನರನ್ನು ಸ್ಥಳಾಂತರಿಸುವ ಕಾರ್ಯ ಮಾಡುತ್ತಿದ್ದಾರೆ.

ಮಳೆ ನಿಂತಿದಿದ್ದರೂ ನೀರಿನ ಪ್ರಮಾಣ ಇಳಿದಿಲ್ಲ. ಮಳೆ ಮತ್ತೆ ಬಂದಲ್ಲಿ ಇಡೀ ಗ್ರಾಮ ಜಲಾವೃತವಾಗುವ ಸಾಧ್ಯತೆ ಇದೆ. ನೆರೆಯಿಂದ ತೊಂದರೆಗೊಳಗಾದ ಜನರಿಗೆ ಗಂಜಿಕೇಂದ್ರ ತೆರೆಯಲು ಕಂದಾಯ ಅಧಿಕಾರಿಗಳು ಮುಂದಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲಂಡನ್‌ನಲ್ಲಿ ವಿಜಯ್‌ ಮಲ್ಯ 70ನೇ ಬರ್ತ್‌ಡೇಗೆ ಲಲಿತ್ ಮೋದಿಯಿಂದ ಅದ್ದೂರಿ ಪಾರ್ಟಿ: ಕಿರಣ್ ಮಜುಂದಾರ್ ಭಾಗಿ
ತನ್ನ ಮೊದಲ ಕ್ರೆಡಿಟ್‌ ಕಾರ್ಡ್‌ ಬಿಡುಗಡೆ ಮಾಡಿದ Google Pay, ಏನಿದರ ವಿಶೇಷತೆ?