ಸಿಲಿಕಾನ್ ಸಿಟಿಯಲ್ಲಿ ವಾರ್ಧಾ ಆರ್ಭಟ: ರಾತ್ರಿಯಿಡೀ ಸುರಿದ ಭಾರಿ ಮಳೆ

Published : Dec 13, 2016, 02:05 AM ISTUpdated : Apr 11, 2018, 01:05 PM IST
ಸಿಲಿಕಾನ್ ಸಿಟಿಯಲ್ಲಿ ವಾರ್ಧಾ ಆರ್ಭಟ: ರಾತ್ರಿಯಿಡೀ ಸುರಿದ ಭಾರಿ ಮಳೆ

ಸಾರಾಂಶ

ನಗರದ ಆಡುಗೋಡಿ, ಕೋರಮಂಗಲ, ಶಾಂತಿನಗರ, ಮಲ್ಲೇಶ್ವರಂ, ವಿಜಯನಗರ, ಶೇಷಾದ್ರಿಪುರಂ, ಶಿವಾನಂದ ಸರ್ಕಲ್, ಕಾರ್ಪೊರೇಷನ್ ಸರ್ಕಲ್  ನಾನಾ ಕಡೆ ಭಾರೀ ಮಳೆಯಾಗಿದೆ. ಇದರಿಂದ ವಾಹನ ಸವಾರರು ಪರದಾಡುವಂತಾಯಿತು.

ಬೆಂಗಳೂರು(ಡಿ.13): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾದ ವಾಧ್ರಾ ಚಂಡಮಾರುತದ ಬಿಸಿ ಸಿಲಿಕಾನ್ ಸಿಟಿಗೂ ತಟ್ಟಿದೆ. ನಗರದಲ್ಲಿ ನಿನ್ನೆ ಸಂಜೆಯಿಂದಲೂ ಮಳೆ ಸುರಿಯುತ್ತಲೇ ಇದೆ. ಈ ಕುರಿತಾದ ಡಿಟೇಲ್ಸ್ ಇಲ್ಲಿದೆ ನೋಡಿ.

ಬೆಂಗಳೂರಲ್ಲಿ ರಾತ್ರಿಯಿಡಿ ಸುರಿದ ವರ್ಷಧಾರೆ

ನಗರದ ಆಡುಗೋಡಿ, ಕೋರಮಂಗಲ, ಶಾಂತಿನಗರ, ಮಲ್ಲೇಶ್ವರಂ, ವಿಜಯನಗರ, ಶೇಷಾದ್ರಿಪುರಂ, ಶಿವಾನಂದ ಸರ್ಕಲ್, ಕಾರ್ಪೊರೇಷನ್ ಸರ್ಕಲ್  ನಾನಾ ಕಡೆ ಭಾರೀ ಮಳೆಯಾಗಿದೆ. ಇದರಿಂದ ವಾಹನ ಸವಾರರು ಪರದಾಡುವಂತಾಯಿತು.

ಇಂದಿರಾನಗರದಲ್ಲಿ ಮರವೊಂದು ಧರೆಗುರುಳಿದೆ. ತಗ್ಗು ಪ್ರದೇಶಗಳಿಗೂ ನೀರು ನುಗ್ಗಿದ್ದು. ಇಂದು ಮತ್ತು ನಾಳೆ ಕೂಡ ಮಳೆ ಮುಂದುವರಿಯುವ ಸಾಧ್ಯತೆ ಇದೆ ಹವಾಮಾನ ಇಲಾಖೆ ನಿರ್ದೇಶಕ ಸುಂದರ್ ಮೇತ್ರಿ ತಿಳಿಸಿದ್ದಾರೆ.

ಬಿಬಿಎಂಪಿ ಈಗಾಗಲೇ ಸಹಾಯವಾಣಿಯನ್ನು ಆರಂಭಿಸಿದೆ. ಮೇಯರ್ ಜಿ.ಪದ್ಮಾವತಿಯವರು ಮುಂಜಾಗ್ರತಾ ಕ್ರಮಗಳನ್ನ ತೆಗೆದುಕೊಂಡಿರುವುದಾಗಿ ಟ್ವಿಟರ್ ಮೂಲಕ ತಿಳಿಸಿದ್ದಾರೆ.

ನಿನ್ನೆಗಿಂತಲೂ ಇಂದು ಮಳೆಯ ತೀವ್ರತೆ ಕೂಡ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಪಾಲಿಕೆ ಹಾಗೂ ಸಾರ್ವಜನಿಕರು ಮುಂಜಾಗ್ರತೆ ವಹಿಸುವುದು ಮುಖ್ಯ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಾಳೆ ಬೆಂಗಳೂರಿನ ಹಲೆವೆಡೆ ಪವರ್ ಕಟ್, ಸಾರ್ವಜನಿಕರಿಗೆ ಮಹತ್ವದ ಸೂಚನೆ
ಅನೇಕಲ್‌ನಲ್ಲಿ ಭೀಕರ ಅಪಘಾತ; 20 ವಾಹನಕ್ಕೆ ಕಂಟೈನರ್ ಡಿಕ್ಕಿ, 2ಕ್ಕೂ ಹೆಚ್ಚು ಸಾವು, ಹಲವರು ಗಂಭೀರ