
ಬೆಂಗಳೂರು: ಕಳೆದ ಎರಡು- ಮೂರು ದಿನಗಳಿಂದ ರಾಜ್ಯಾದ್ಯಂತ ಬಿಡುವು ನೀಡಿದ ಮಳೆ ಮಲೆನಾಡು ಪ್ರದೇಶದಲ್ಲಿ ಮತ್ತೆ ಚುರುಕುಗೊಂಡಿದೆ. ಶೃಂಗೇರಿ ತಾಲೂಕಿನಲ್ಲಿ ಹೆಚ್ಚಿನ ಮಳೆಯಾಗಿದ್ದರೆ, ಶಿವಮೊಗ್ಗ, ಕೊಡಗು, ಉತ್ತರ ಕನ್ನಡದ ಮಲೆನಾಡು ಪ್ರದೇಶದಲ್ಲಿ ಸಾಧಾರಣ ಮಳೆ ದಾಖಲಾಗಿದೆ. ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ನಿಲ್ಲದ ಕಾರಣ ಕೃಷ್ಣಾ ನದಿ ತೀರದ ಪ್ರದೇಶಗಳಲ್ಲಿ ಜಲಾವೃತವಾಗಿರುವ ಪ್ರದೇಶಗಳು ಹಾಗೆಯೇ ಇವೆ. ಕರಾವಳಿ ಪ್ರದೇಶದಲ್ಲಿಯೂ ಸಾಧಾರಣ ಮಳೆ ಕಂಡುಬಂದಿದೆ.
ಬೆಳಗಾವಿ ಜಿಲ್ಲೆಯಲ್ಲಿ ಮಳೆ ಇಲ್ಲದಿದ್ದರೂ ಕೃಷ್ಣಾ ನದಿ ತೀರ ಪ್ರದೇಶ ವ್ಯಾಪ್ತಿಯಲ್ಲಿ ಮುಳು ಗಡೆಯಾಗಿದ್ದ 13 ಸೇತುವೆಗಳು ಇನ್ನೂ ಸಂಚಾರಕ್ಕೆ ಮುಕ್ತವಾಗಿಲ್ಲ. ರಾಯಬಾಗ ತಾಲೂಕಿನ ಶಿರಗೂರ ಮತ್ತು ಗುಂಡವಾಡ ಗ್ರಾಮಗಳ ರೈತರ ಗದ್ದೆಗಳಲ್ಲಿ ನೀರು ನುಗ್ಗಿದ್ದರಿಂದ ಸಾಕಷ್ಟು ಪ್ರಮಾಣದ ಬೆಳೆ ಹಾನಿಯಾಗಿದೆ. ಕೃಷ್ಣಾ ನದಿ ತೀರದಲ್ಲಿರುವ ಇವೆರಡೂ ಗ್ರಾಮಗಳು ಭಾಗಶಃ ಮುಳುಗಡೆ ಆಗಿದೆ. ಹೀಗಾಗಿ ಗ್ರಾಮಕ್ಕೆ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.