
ಬೆಂಗಳೂರು(ಅ.27): ಈಶಾನ್ಯ ಮುಂಗಾರು ಅಕ್ಟೋಬರ್ 30ರಿಂದ ಆರಂಭವಾಗಲಿದ್ದು, ತಮಿಳುನಾಡು ಸೇರಿದಂತೆ ದಕ್ಷಿಣ ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ 72 ಗಂಟೆಗಳಲ್ಲಿ ‘ಕ್ಯಾಂಟ್’ ಚಂಡಮಾರುತವು ಬಂಗಾಳಕೊಲ್ಲಿಯ ಪೂರ್ವ ಕೇಂದ್ರ ಭಾಗದಿಂದ ದಕ್ಷಿಣದ ಕಡೆ ಸಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈಶಾನ್ಯ ಮುಂಗಾರಿನಿಂದಾಗಿ 2015ರಲ್ಲಿ ತಮಿಳುನಾಡಿನಲ್ಲಿ ದಾಖಲೆ ಮಳೆಯಾಗಿತ್ತು. ‘ಕ್ಯಾಂಟ್’ ಚಂಡಮಾರುತದ ಬಗ್ಗೆ ಹವಾಮಾನ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿರುವ ಕಾರಣ ವಿಶಾಖಪಟ್ಟಣ ಮತ್ತು ಮಚಲೀಪಟ್ಟಣದ ಜಿಲ್ಲಾಧಿಕಾರಿಗಳಿಗೆ ಆಂಧ್ರಪ್ರದೇಶ ಸರ್ಕಾರ, ಮುನ್ನೆಚ್ಚರಿಕೆ ವಹಿಸಲು ಸೂಚಿಸಿದೆ.
ಈ ವೇಳೆ ಸಮುದ್ರದಲ್ಲಿ ಏರಿಳಿತಗಳು ಕಂಡುಬರುವ ಕಾರಣ ಅಕ್ಟೋಬರ್ 27ರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.