
ಧಾರವಾಡ/ಸುಬ್ರಹ್ಮಣ್ಯ : ಯುಗಾದಿ ಮುನ್ನಾದಿನವಾದ ಶುಕ್ರವಾರದಂದು ರಾಜ್ಯದ ಕೆಲವೆಡೆ ಬೇಸಿಗೆ ಮಳೆ ತಂಪೆರೆದಿದ್ದು ಕೆಲವೆಡೆ ಆಲಿಕಲ್ಲು ಮಳೆಯಾಗಿರುವ ಬಗ್ಗೆ ವರದಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಶುಕ್ರವಾರ ಸಂಜೆ ಗುಡುಗು ಸಹಿತ ಭಾರಿ ಗಾಳಿ ಮಳೆಯೊಂದಿಗೆ ಆಲಿಕಲ್ಲಿನ ಸುರಿಮಳೆಯಾಗಿದೆ. ಮಳೆ ಬರುವ ಮುಂಚಿತವಾಗಿ ಬೀಸಿದ ಗಾಳಿಗೆ ಸುಬ್ರಹ್ಮಣ್ಯ ನೂಚಿಲ ಮನೆಯ ಮೇಲೆ ಬೃಹದಾಕಾರದ ಮರ ಬಿದ್ದು ಹಾನಿಯಾಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಸುತ್ತಮುತ್ತಲ ಪ್ರದೇಶಗಳ ಕೆಲವು ಕೃಷಿ ತೋಟಗಳು ವಿಪರೀತ ಗಾಳಿಗೆ ಹಾನಿಗೀಡಾಗಿವೆ. ಧಾರವಾಡ ನಗರದಲ್ಲಿ ಶುಕ್ರವಾರ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಸಾಧಾರಣ ಮಳೆಯಾಗಿದೆ. ಗುರುವಾರ ತಡರಾತ್ರಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ನಾನಾ ಕಡೆ ಸುರಿದ ಭಾರೀ ಪ್ರಮಾಣ ಬಿರುಗಾಳಿ ಮಿಶ್ರಿತ ಆಲಿಕಲ್ಲು ಮಳೆಗೆ ಒಂದು ಎಮ್ಮೆ ಹಾಗೂ 23 ಕುರಿಗಳು ಬಲಿಯಾಗಿವೆ.
ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ 300ಕ್ಕೂ ಅಧಿಕ ಹೆಕ್ಟೇರ್ ಬೆಳೆ ನಾಶವಾಗಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿಯೂ ಸಂಜೆ ವೇಳೆಗೆ ಗುಡುಗುಸಹಿತ ಭಾರಿ ಮಳೆಯಾಗಿದೆ. ಮಹಾರಾಷ್ಟ್ರದ ಕೆಲವೆಡೆ ಮಳೆಯಾಗಿರುವುದರಿಂದ ರಾಜಾಪುರ ಬ್ಯಾರೇಜ್ನಿಂದ 7 ಗೇಟ್ಗಳ ಮೂಲಕ ಕೃಷ್ಣಾ ನದಿಗೆ ಬೃಹತ್ ಪ್ರಮಾಣದಲ್ಲಿ ರಾಜ್ಯಕ್ಕೆ ನೀರು ಹರಿದು ಬರುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.