ರಾಜ್ಯದ ಹಲವೆಡೆ ಭಾರಿ ಪ್ರಮಾಣದಲ್ಲಿ ಆಲಿಕಲ್ಲು ಮಳೆ

Published : Apr 06, 2019, 11:23 AM IST
ರಾಜ್ಯದ ಹಲವೆಡೆ ಭಾರಿ ಪ್ರಮಾಣದಲ್ಲಿ ಆಲಿಕಲ್ಲು ಮಳೆ

ಸಾರಾಂಶ

ಯುಗಾದಿ ಹಬ್ಬದ ಮುನ್ನಾ ದಿನ ರಾಜ್ಯದ ಹಲವೆಡೆ ಆಲಿಕಲ್ಲು ಸಹಿತ ಮಳೆಯಾಗಿದೆ. 

ಧಾರವಾಡ/ಸುಬ್ರಹ್ಮಣ್ಯ : ಯುಗಾದಿ ಮುನ್ನಾದಿನವಾದ ಶುಕ್ರವಾರದಂದು ರಾಜ್ಯದ ಕೆಲವೆಡೆ ಬೇಸಿಗೆ ಮಳೆ ತಂಪೆರೆದಿದ್ದು ಕೆಲವೆಡೆ ಆಲಿಕಲ್ಲು ಮಳೆಯಾಗಿರುವ ಬಗ್ಗೆ ವರದಿಯಾಗಿದೆ. 

ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಶುಕ್ರವಾರ ಸಂಜೆ ಗುಡುಗು ಸಹಿತ ಭಾರಿ ಗಾಳಿ ಮಳೆಯೊಂದಿಗೆ ಆಲಿಕಲ್ಲಿನ ಸುರಿಮಳೆಯಾಗಿದೆ. ಮಳೆ ಬರುವ ಮುಂಚಿತವಾಗಿ ಬೀಸಿದ ಗಾಳಿಗೆ ಸುಬ್ರಹ್ಮಣ್ಯ ನೂಚಿಲ ಮನೆಯ ಮೇಲೆ ಬೃಹದಾಕಾರದ ಮರ ಬಿದ್ದು ಹಾನಿಯಾಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. 

ಸುತ್ತಮುತ್ತಲ ಪ್ರದೇಶಗಳ ಕೆಲವು ಕೃಷಿ ತೋಟಗಳು ವಿಪರೀತ ಗಾಳಿಗೆ ಹಾನಿಗೀಡಾಗಿವೆ. ಧಾರ​ವಾ​ಡ​ ನಗರದಲ್ಲಿ ಶುಕ್ರವಾರ ಸುಮಾರು ಅರ್ಧ​ಗಂಟೆಗೂ ಹೆಚ್ಚು ಕಾಲ ಸಾಧಾ​ರಣ ಮಳೆ​ಯಾ​ಗಿದೆ. ಗುರು​ವಾರ ತಡರಾತ್ರಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ನಾನಾ ಕಡೆ ಸುರಿದ ಭಾರೀ ಪ್ರಮಾ​ಣ ಬಿರು​ಗಾಳಿ ಮಿಶ್ರಿತ ಆಲಿ​ಕಲ್ಲು ಮಳೆಗೆ ಒಂದು ಎಮ್ಮೆ ಹಾಗೂ 23 ಕುರಿಗಳು ಬಲಿ​ಯಾ​ಗಿವೆ. 

ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ 300ಕ್ಕೂ ಅಧಿಕ ಹೆಕ್ಟೇರ್‌ ಬೆಳೆ ನಾಶವಾಗಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿಯೂ ಸಂಜೆ ವೇಳೆಗೆ ಗುಡುಗುಸಹಿತ ಭಾರಿ ಮಳೆಯಾಗಿದೆ. ಮಹಾರಾಷ್ಟ್ರದ ಕೆಲವೆಡೆ ಮಳೆಯಾಗಿರುವುದರಿಂದ ರಾಜಾಪುರ ಬ್ಯಾರೇಜ್‌ನಿಂದ 7 ಗೇಟ್‌ಗಳ ಮೂಲಕ ಕೃಷ್ಣಾ ನದಿಗೆ ಬೃಹತ್‌ ಪ್ರಮಾಣದಲ್ಲಿ ರಾಜ್ಯಕ್ಕೆ ನೀರು ಹರಿದು ಬರುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು