
ಬೆಂಗಳೂರು : ರಾಜ್ಯದ ಏಳು ಜಿಲ್ಲೆಗಳಲ್ಲಿ ಶನಿವಾರ ಸಂಜೆ ಉತ್ತಮ ಮಳೆ ಸುರಿದಿದ್ದು ಬಿಸಿಲಿಗೆ ಬಳಲಿದ್ದ ಇಳೆಗೆ ತಂಪೆರೆದಿದೆ. ದಕ್ಷಿಣ ಕನ್ನಡ, ಚಾಮರಾಜನಗರ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಗಾಳಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು ಹತ್ತಾರು ಮನೆಗಳು ಜಖಂ ಆಗಿವೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೆಲವು ಭಾಗಗಳಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿದ್ದು, ಮನೆ, ಅಂಗಡಿ ಮುಂಗಟ್ಟುಗಳಿಗೆ ಹಾನಿಗಳಾಗಿವೆ. ಧರ್ಮಸ್ಥಳ ಬಳಿ ಬೆಂಗಳೂರು- ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಮರ ಬಿದ್ದು ಕೆಲಕಾಲ ಸಂಚಾರ ಬಂದ್ ಆಗಿತ್ತು. ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ, ಬಾಚಹಳ್ಳಿ, ಕಣಿಯನಪುರ, ಕಲಿಗೌಡನಹಳ್ಳಿ, ಕುಂದಕೆರೆ, ಕೆಬ್ಬೇಪುರ, ಜಕ್ಕಹಳ್ಳಿಯಲ್ಲಿ ಬಿರುಗಾಳಿಯಿಂದ ಕೂಡಿದ ಮಳೆಯಾಗಿದೆ.
ಕನ್ನೇಗಾಲದಲ್ಲಿ ಹಲವಾರು ಮನೆಗಳು ಜಖಂಗೊಂಡು ವಿದ್ಯುತ್ ಕಂಬ, ಮರಗಳು ನೆಲಕ್ಕುರುಳಿವೆ. ಬಂಡೀಪುರದಲ್ಲಿ ಸುರಿಯುತ್ತಿದ್ದ ಮಳೆಗೆ ಜಿಂಕೆಗಳು ರಸ್ತೆಯ ಇಕ್ಕೆಲಗಳಿಗೆ ಬಂದು ನೆನೆಯುತ್ತ ನಿಂತಿದ್ದು ಕಂಡುಬಂತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.