ಕರ್ನಾಟಕ, ಕೇರಳಕ್ಕೆ ಮತ್ತೊಂದು ಶಾಕಿಂಗ್ ನ್ಯೂಸ್

Published : Aug 18, 2018, 12:33 PM ISTUpdated : Sep 09, 2018, 09:05 PM IST
ಕರ್ನಾಟಕ, ಕೇರಳಕ್ಕೆ ಮತ್ತೊಂದು ಶಾಕಿಂಗ್ ನ್ಯೂಸ್

ಸಾರಾಂಶ

ಮುನಿಸಿಕೊಂಡಿರುವ ನಿಸರ್ಗ ಸದ್ಯಕ್ಕೆ ಶಾಂತವಾಗುವಂತೆ ಕಾಣುತ್ತಿಲ್ಲ. ಕೇರಳ ಮತ್ತು ಕರ್ನಾಟಕದಲ್ಲಿ ಈ ವಾರದ ಅಂತ್ಯದಲ್ಲೂ ಭಾರೀ ಮಳೆಯಾಗಲಿದೆ ಎಂದಿ ಎಂದು ಹವಾಮಾನ  ಇಲಾಖೆ ತಿಳಿಸಿದೆ.

ಚೆನ್ನೈ[ಆ.18]  ಈಗಾಗಲೇ ಸತತ ಭೀಕರ ಮಳೆಯಿಂದ ತತ್ತರಿಸಿರುವ ಕೇರಳ, ಕರ್ನಾಟಕ, ತಮಿಳುನಾಡಿನಲ್ಲಿ ವಾರಾಂತ್ಯದಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಮುಂಗಾರು ಕೇರಳದಲ್ಲಿ ಬಿರುಸಿನಿಂದ ಕೂಡಿದೆ ಮತ್ತು ತೆಲಂಗಾಣ, ಲಕ್ಷದ್ವೀಪ, ಕರಾವಳಿ ಕರ್ನಾಟಕ, ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದೆ ಎಂದು ಪ್ರಾದೇಶಿಕ ಹವಾಮಾನ ಕಚೇರಿ ಮೂಲಗಳು ತಿಳಿಸಿವೆ. ಕರಾವಳಿ ಕರ್ನಾಟಕದಲ್ಲಿ ಶನಿವಾರ ಹಾಗೂ ಭಾನುವಾರವೂ ಭೀಕರ ಮಳೆ ಮುಂದುವರಿಯಲಿದೆ. ಇನ್ನುಳಿದಂತೆ ಕೇರಳ, ಲಕ್ಷದ್ವೀಪ, ಕರ್ನಾಟಕದ ದಕ್ಷಿಣ ಒಳನಾಡು, ತೆಲಂಗಾಣ, ತಮಿಳುನಾಡಿನಲ್ಲೂ ಭಾರೀ ಮಳೆಯಾಗಲಿದೆ.

ಮಳೆ ಬಂದರೆ ಕೊಡಗು, ದಕ್ಷಿಣ ಕನ್ನಡದಲ್ಲಿ ಭೂಮಿ ಏಕೆ ಕುಸಿಯುತ್ತೆ?

ಕೇರಳದಲ್ಲಿ 400ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದು ಕೊಡಗಿನಲ್ಲಿಯೂ ವರುಣನ ಆರ್ಭಟವಿದೆ. ಒಂದು ಕಡೆ ಮಳೆ ಹಾನಿ ಪರಿಹಾರಕ್ಕೆ ಸರಕಾರಗಳು, ಆಡಳಿತ, ಜನರು, ಸ್ವಯಂ ಸೇವಾ ಸಂಸ್ಥೆಗಳು ಶ್ರಮಿಸುತ್ತಿವೆ. ಆದರೆ ಮುನಿಸಿಕೊಂಡಿರುವ ನಿಸರ್ಗ ಸದ್ಯಕ್ಕೆ ಶಾಂತವಾಗುವ ಲಕ್ಷಣ ಕಾಣುತ್ತಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿ ಕಾರು ಅಪಘಾತ, ಬೈಕ್ ಸವಾರ ಗಂಭೀರ
ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಮನೆ ಸಂಪ್ ಕ್ಯಾಪ್ ಕಳ್ಳತನ ಮಾಡಿ 700 ರೂಗೆ ಮಾರಾಟ, ಆರೋಪಿ ಅರೆಸ್ಟ್