ವಾಯುಭಾರ ಕುಸಿತ : ರಾಜ್ಯದ ಹಲವೆಡೆ ಮತ್ತೆ ಭಾರೀ ಮಳೆ

Published : Sep 22, 2019, 11:17 AM ISTUpdated : Dec 03, 2019, 03:19 PM IST
ವಾಯುಭಾರ ಕುಸಿತ : ರಾಜ್ಯದ ಹಲವೆಡೆ ಮತ್ತೆ ಭಾರೀ ಮಳೆ

ಸಾರಾಂಶ

ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಮತ್ತೆ ಭಾರೀ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನಿಡಿದೆ. 

ಬೆಂಗಳೂರು [ಸೆ.22]:  ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದ್ದು ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 

ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಭಾಗದಲ್ಲಿ ಮುಂಗಾರು ಚುರುಕುಗೊಂಡಿದೆ. ಇದರ ಪರಿಣಾಮ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ದಕ್ಷಿಣ ಒಳನಾಡಿನಲ್ಲಿ ಮುಂಗಾರು ಮಳೆಯ ತೀವ್ರತೆ ಹೆಚ್ಚುವ ಸಾಧ್ಯತೆ ಇದ್ದು, ಮುಂದಿನ 5 ದಿನಗಳಲ್ಲಿ ಉತ್ತರ ಒಳನಾಡು, ಮಲೆನಾಡು, ಕರಾವಳಿ ಸೇರಿ ರಾಜ್ಯದೆಲ್ಲೆಡೆ ವ್ಯಾಪಿಸಲಿದೆ. ಅಲ್ಲದೆ 65 ಮಿ.ಮೀ.ನಿಂದ 115 ಮಿ.ಮೀ.ವರೆಗೆ ಮಳೆಯಾಗಲಿದೆ ಎಂದು ತಿಳಿಸಿದೆ.

ಬೆಂಗಳೂರಲ್ಲಿ ಭಾರಿ ಮಳೆ : ಬೆಂಗಳೂರು ನಗರದಲ್ಲಿ ಭಾನುವಾರ ಬೆಳಗ್ಗಿನಿಂದಲೂ ಹೆಚ್ಚಿನ ಮಳೆ ಸುರಿಯುತ್ತಿದೆ. ಇನ್ನೂ ಹೆಚ್ಚಿನ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
Vastu Shastra: ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!