ನಾಳೆಯಿಂದ 4 ದಿನ ಕರಾವಳಿ ಮಲೆನಾಡಿನಲ್ಲಿ ಭಾರಿ ಮಳೆ?

Published : Jun 05, 2018, 07:28 AM IST
ನಾಳೆಯಿಂದ 4 ದಿನ ಕರಾವಳಿ ಮಲೆನಾಡಿನಲ್ಲಿ ಭಾರಿ ಮಳೆ?

ಸಾರಾಂಶ

ರಾಜ್ಯದ ಕರಾವಳಿ ಮತ್ತು ಅದಕ್ಕೆ ಹೊಂದಿಕೊಂಡಿರುವ ಮಲೆನಾಡು ಭಾಗಗಳಲ್ಲಿ ಜೂನ್‌ 6ರಿಂದ 10ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.  

ಬೆಂಗಳೂರು :  ರಾಜ್ಯದ ಕರಾವಳಿ ಮತ್ತು ಅದಕ್ಕೆ ಹೊಂದಿಕೊಂಡಿರುವ ಮಲೆನಾಡು ಭಾಗಗಳಲ್ಲಿ ಜೂನ್‌ 6ರಿಂದ 10ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.

ಕರಾವಳಿ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಕೊಂಚ ಹೆಚ್ಚಾಗಿರುವುದರಿಂದ ನಾಲ್ಕು ದಿನಗಳ ಕಾಲ ಆ ಭಾಗದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಕರಾವಳಿಗೆ ಹೊಂದಿಕೊಂಡಿರುವ ಮಲೆನಾಡು ಮತ್ತು ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಸುತ್ತಮುತ್ತ ಹೆಚ್ಚಿನ ಮಳೆಯಾಗಬಹುದು. ಉಳಿದಂತೆ ಬೆಂಗಳೂರು, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಬದಲು ಸಾಧಾರಣ ಮಳೆ ಬೀಳಲಿದೆ. ಸದ್ಯಕ್ಕೆ ಚಂಡಮಾರುತದ ಯಾವ ಲಕ್ಷಣಗಳೂ ಇಲ್ಲ ಎಂದು ಹೇಳಿದ್ದಾರೆ.

ಮೇ 30ರಂದು ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶಿಸಿದೆ. ಚಿತ್ರದುರ್ಗ, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡು, ಕರಾವಳಿವರೆಗೂ ಮುಂಗಾರು ವ್ಯಾಪಿಸಿದೆ. ಮುಂಗಾರು ಪ್ರವೇಶದ ಬಳಿಕ ರಾಜ್ಯದ ಅರ್ಧ ಭಾಗದಲ್ಲಿ ಮಳೆಯಾಗುತ್ತಿದೆ. ಕರಾವಳಿಯಲ್ಲಿ ಮಳೆ ಆರ್ಭಟ ತುಸು ಹೆಚ್ಚಾಗಿಯೇ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೊಂಟಕ್ಕಿಂತ ಕೆಳಗೆ ಮಹಿಳೆಯರು ಚಿನ್ನ ಧರಿಸಬಾರದು ಅಂತಾ ಹೇಳೋದು ಯಾಕೆ? ಶೇ. 99ರಷ್ಟು ಜನರಿಗೆ ಇದು ಗೊತ್ತಿಲ್ಲ!
ಗರ್ಲ್‌ಫ್ರೆಂಡ್ ಜೊತೆ ಒಂದು ದಿನ ಕಳೆಯಲು ರಜೆ ಕೊಡಿ, ಉದ್ಯೋಗಿ ಇಮೇಲ್‌ಗೆ ಮ್ಯಾನೇಜರ್ ಮಾಡಿದ್ದೇನು?