
ಗುವಾಹಟಿ(ಆ.14): ಉತ್ತರ ಹಾಗೂ ಈಶಾನ್ಯ ಭಾರತದ ಹಲವು ರಾಜ್ಯಗಳಲ್ಲಿ ಮತ್ತೆ ಜಲಪ್ರಳಯವಾಗತೊಡಗಿದೆ.
ಬಿಹಾರ ಹಾಗೂ ನೆರೆಯ ನೇಪಾಳದಲ್ಲಿ ಬೀಳುತ್ತಿರುವ ಭಾರಿ ಮಳೆಯಿಂದಾಗಿ ಬಿಹಾರದ ನದಿಗಳಲ್ಲಿ ಪ್ರವಾಹ ಭೀತಿ ಹೆಚ್ಚತೊಡಗಿದ್ದು, ಸೇನೆ ಹಾಗೂ ವಾಯುಪಡೆಯನ್ನು ರಕ್ಷಣಾ ಕಾರ್ಯಕ್ಕೆ ನಿಯೋಜಿಸುವಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕೇಂದ್ರ ಗೃಹ ಸಚಿವ ರಾಜನಾಥ್ ಸೀಂಗ್ ಅವರನ್ನು ಕೋರಿದ್ದಾರೆ.
ಸೀಮಾಂಚಲದ ಸುಮಾರು ಅರ್ಧ ಡಜನ್ ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಹಳ್ಳಿಗಳೆಲ್ಲ ನಡುಗಡ್ಡೆಗಳಂತೆ ಭಾಸವಾಗುತ್ತಿವೆ. ಇನ್ನು ಅಸ್ಸಾಂನಲ್ಲಿ ಕೂಡಾ ಭಾರೀ ಮಳೆಯಿಂದಾಗಿ 21 ಜಿಲ್ಲೆಗಳ ಸುಮಾರು 22.5 ಲಕ್ಷ ಜನ ಪ್ರವಾಹ ಪೀಡಿತರಾಗಿದ್ದಾರೆ. ಈಗಾಗಲೇ 10 ಜನ ಮೃತಪಟ್ಟಿದ್ದು, ಪ್ರವಾಹ ಪರಿಹಾರಕ್ಕೆ ಸೇನೆಗೆ ಬುಲಾವ್ ನೀಡಲಾಗಿದೆ. ಪಶ್ಚಿಮ ಬಂಗಾಳದಲ್ಲೂ ಇದೇ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈಲು ಸೇವೆ ಅಸ್ತವ್ಯಸ್ತವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.