ಮಳೆಯಾಗುತ್ತಿದ್ದರೂ ಬಿಸಿಲ ತಾಪಕ್ಕೆ ತತ್ತರಿಸಿವೆ ಹಲವು ಜಿಲ್ಲೆ

Published : May 02, 2018, 08:19 AM IST
ಮಳೆಯಾಗುತ್ತಿದ್ದರೂ ಬಿಸಿಲ ತಾಪಕ್ಕೆ ತತ್ತರಿಸಿವೆ ಹಲವು ಜಿಲ್ಲೆ

ಸಾರಾಂಶ

 ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದರೂ ಬಿಸಿಲಿನ ತಾಪದಿಂದ ಅಕ್ಷರಶಃ ತತ್ತರಿಸುತ್ತಿದ್ದಾರೆ. ರಣ ಬಿಸಿಲಿನಿಂದ ಜನ, ಜಾನುವಾರುಗಳು ಪರಿತಪಿಸುವಂತಾಗಿದೆ

ಕಲಬುರಗಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದರೂ ಬಿಸಿಲಿನ ತಾಪದಿಂದ ಅಕ್ಷರಶಃ ತತ್ತರಿಸುತ್ತಿದ್ದಾರೆ. ರಣ ಬಿಸಿಲಿನಿಂದ ಜನ, ಜಾನುವಾರುಗಳು ಪರಿತಪಿಸುವಂತಾಗಿದೆ.  ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಗರಿಷ್ಠ ತಾಪಮಾನ ಕಳೆದ ವಾರಕ್ಕಿಂತ 1-2 ಡಿಗ್ರಿ ಏರಿಕೆಯಾಗಿದೆ.

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಯಡ್ರಾಮಿ ಹೋಬಳಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮಂಗಳವಾರ 43.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಇದು ಈ ತಿಂಗಳ ಸರಾಸರಿಗಿಂತ 2.3 ಡಿಗ್ರಿ ಹೆಚ್ಚಾಗಿದ್ದು, ಈ ವರ್ಷದ ಗರಿಷ್ಠ ತಾಪ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.  
ಆದರೆ, ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡುವ ಮಾಹಿತಿಯೇ  ಬೇರೆ. ಕಲಬುರಗಿಯ ಹಲವೆಡೆ ಮಂಗಳವಾರ ಗರಿಷ್ಠ ತಾಪಮಾನ 44 ಡಿ. ಸೆ.ವರೆಗೆ ತಲುಪಿದೆ ಎಂದು ಕೇಂದ್ರದ ನಿರ್ದೇಶಕ ಶ್ರೀನಿವಾಸ ರೆಡ್ಡಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರಧಾನಿಗೆ ಪತ್ರ ಬರೆಯುವುದರಲ್ಲಿ ಸಿದ್ದರಾಮಯ್ಯ, ಡಿಕೆಶಿ ನಿಸ್ಸೀಮರು: ಬಿ.ವೈ.ವಿಜಯೇಂದ್ರ
ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?