ಬೆಂಗಳೂರಿನಲ್ಲಿ ಭಾರೀ ಸಂಚಾರ ದಟ್ಟಣೆ

Published : Oct 22, 2018, 08:00 AM IST
ಬೆಂಗಳೂರಿನಲ್ಲಿ ಭಾರೀ ಸಂಚಾರ ದಟ್ಟಣೆ

ಸಾರಾಂಶ

ಸಾಲು ಸಾಲು ರಜೆಯಿಂದ ಊರುಗಳತ್ತ ತೆರಳಿದವರು ವಾಪಸ್ ಬೆಂಗಳೂರಿಗೆ ಆಗಮಿಸಿದ್ದು ಇದರಿಂದ ಭಾರೀ ಪ್ರಮಾಣದಲ್ಲಿ ನೆಲಮಂಗಲದ ಬಳಿ ಸಂಚಾರ ದಟ್ಟಣೆ ನಿರ್ಮಾಣವಾಯಿತು. 

ಬೆಂಗಳೂರು: ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರಿಗೆ ತೆರಳಿದ್ದವರು ವಾಪಸ್ ಭಾನುವಾರ ಮಧ್ಯಾಹ್ನದ ಮೇಲೆ ಒಮ್ಮೆಲೇ ಬೆಂಗಳೂರಿನತ್ತ ಮುಖ ಮಾಡಿದ್ದರಿಂದ ಭಾರೀ ಪ್ರಮಾಣದಲ್ಲಿ ನೆಲಮಂಗಲದ ಬಳಿ ಸಂಚಾರ ದಟ್ಟಣೆ ನಿರ್ಮಾಣವಾಯಿತು. 

ಊರಿಗೆ ತೆರಳಿದ್ದವರು ಭಾರೀ ಸಂಖ್ಯೆಯಲ್ಲಿ ಬೆಂಗಳೂರಿಗೆ ವಾಪಾಸ್ಸಾಗಿದ್ದರಿಂದ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಇದರಿಂದ ಬೆಂಗಳೂರು- ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ ೪ರಲ್ಲಿ ಸಂ ಚಾರ ದಟ್ಟಣೆ ನಿರ್ಮಾಣವಾಗಿ ನಿಧಾನ ಗತಿಯ ಸಂಚಾರ ಸೃಷ್ಟಿಯಾಯಿತು. 

ನೆಲಮಂಗಲದ ನವಯುಗ, ಜಾಸ್, ಲ್ಯಾಂಕೋ ಟೋಲ್, ಕುಣಿಗಲ್ ಬೈಪಾಸ್ ಬಳಿ ಭಾರೀ ಪ್ರಮಾಣದಲ್ಲಿ ವಾಹನ ದಟ್ಟಣೆ ಕಂಡು ಬಂತು. ಜನರು ಬಸ್‌ಗಳ ಟಾಪ್ ಮೇಲೇರಿ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಸಂಚಾರ ದಟ್ಟಣೆ ನಿಯಂತ್ರಿಸಲು ಟ್ರಾಫಿಕ್ ಪೊಲೀಸ್ ಹಾಗೂ ಟೋಲ್ ಸಿಬ್ಬಂದಿ ಹರಸಾಹಸ ಪಟ್ಟರು.

(ಸಾಂದರ್ಬಿಕ ಚಿತ್ರ)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಗರ್ಭ ಶ್ರೀಮಂತನೆಂದು ಎಂಜಿನಿಯರ್‌ನನ್ನ ಮದುವೆಯಾದಳು... ಫಸ್ಟ್‌ ನೈಟ್‌ನಲ್ಲೇ ಬಯಲಾಯ್ತು ಕರಾಳ ಸತ್ಯ!
ಧರ್ಮಸ್ಥಳ ನೂರಾರು ಶವ ಹೂಳಿದ ಕೇಸ್: ಬುರುಡೆ ಗ್ಯಾಂಗ್ ಷಡ್ಯಂತ್ರ ಬಯಲು - SIT ವರದಿಯಲ್ಲಿ ಒಬ್ಬರಿಗೆ ಕ್ಲೀನ್ ಚಿಟ್!