ಸಮಸ್ಯೆ ಪರಿಹಾರಕ್ಕೆ ವಾಗ್ದಾನ ನೀಡಿದ ಸಚಿವರು

Published : Aug 13, 2017, 09:10 PM ISTUpdated : Apr 11, 2018, 01:12 PM IST
ಸಮಸ್ಯೆ ಪರಿಹಾರಕ್ಕೆ ವಾಗ್ದಾನ ನೀಡಿದ ಸಚಿವರು

ಸಾರಾಂಶ

ಇವತ್ತು ಕೂಡಾ ರಾಜ್ಯದ ಮೂಲೆ ಮೂಲೆಯಿಂದ ಜನ ಕರೆ ಮಾಡಿ ತಮ್ಮ ಸಮಸ್ಯೆಗಳನ್ನ  ಹೇಳಿಕೊಂಡ್ರು. ಎಲ್ಲಾ ಸಮಸ್ಯೆಗಳನ್ನ ಕೇಳಿಸಿಕೊಂಡ ಸಚಿವರೇ ಖುದ್ದಾಗಿ  ದೂರುಗಳನ್ನ ದಾಖಲಿಸಿಕೊಂಡರು.

ಹಲೋ ಮಿನಿಸ್ಟರ್..  ಪ್ರತಿವಾರವೂ ಒಬ್ಬ  ಸಚಿವರನ್ನ ಕರೆಯಿಸಿ ರಾಜ್ಯದ ಜನತೆಗೆ ತಮ್ಮ ಸಮಸ್ಯೆಗಳನ್ನ ಹೇಳಿಕೊಳ್ಳೋಕೆ ಸುವರ್ಣ ನ್ಯೂಸ್ ಮಾಡಿರುವ ವೇದಿಕೆ . ಈ ಬಾರಿ ನಮ್ಮ ಹಲೋ ಮಿನಸ್ಟರ್ ಕಾರ್ಯಕ್ರಮದ ಮುಖ್ಯಅತಿಥಿ ಆರೋಗ್ಯ ಸಚಿವ ರಮೇಶ್ ಕುಮಾರ್ .

ಇವತ್ತು ಕೂಡಾ ರಾಜ್ಯದ ಮೂಲೆ ಮೂಲೆಯಿಂದ ಜನ ಕರೆ ಮಾಡಿ ತಮ್ಮ ಸಮಸ್ಯೆಗಳನ್ನ  ಹೇಳಿಕೊಂಡ್ರು. ಎಲ್ಲಾ ಸಮಸ್ಯೆಗಳನ್ನ ಕೇಳಿಸಿಕೊಂಡ ಸಚಿವರೇ ಖುದ್ದಾಗಿ  ದೂರುಗಳನ್ನ ದಾಖಲಿಸಿಕೊಂಡರು. ಜೊತೆಗೆ  ಸಮಸ್ಯೆಗಳನ್ನ ಶೀಘ್ರವಾಗಿ ಪರಿಹರಿಸುವ ವಾಗ್ದಾನ ನೀಡಿದರು.

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕು ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳಿಲ್ಲ. ಈ ಕುರಿತ ಬೆಳಕು ಚೆಲ್ಲಿದ ಸುವರ್ಣ ನ್ಯೂಸ್ ವರದಿಗೆ ಸ್ಪಂದಿಸಿದ ಸಚಿವರು ಹಾಸನದ ಡಿಹೆಚ್ಒಗೆ ತರಾಟೆಗೆ ತೆಗೆದುಕೊಂಡರು. ಇನ್ನೂ ಮದ್ದೂರಿನಿಂದ ಕರೆ ಮಾಡಿದ್ದ ಮೇಘನಾ ಮದ್ದೂರಿನ ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರ ಕೊರತೆ ಬಗ್ಗೆ ಮಾತಾಡಿದರು. ಅಲ್ಲದೆ ಆಸ್ಪತ್ರೇಲಿ ಸ್ವಚ್ಛತೆ ಇಲ್ಲ ಅಂತಾನೂ ಹೇಳಿದರು.

ಸಾರ್ವಜನಿಕರು ರಾಜ್ಯದ  ಮೂಲೆ ಮೂಲೆಯಿಂದ ಕರೆ ಮಾಡಿ ತಮ್ಮ ಸಮಸ್ಯೆಗಳನ್ನ ಹೇಳಿಕೊಂಡರು. ಒಟ್ಟಿನಲ್ಲಿ ಈ ಬಾರಿ ಕೂಡಾ ಹಲೋ ಮಿನಿಸ್ಟರ್ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್! ಖಾತೆಗೆ ಯಾವಾಗ ಬರುತ್ತೆ ಹಣ? ಇಲ್ಲಿದೆ ವಿವರ
ಪ್ರೀತಿ ವಿರೋಧಿಸಿದ ತಂದೆಯನ್ನು ಗೆಳೆಯನ ಜೊತೆ ಸೇರಿ ಮಸಣಕ್ಕೆ ಅಟ್ಟಿದ ಪಾಪಿ ಮಗಳು