
ಆಗ್ರಾ(ನ.05): ಬಿಜೆಪಿ ಸಂಸದೆ ಹಾಗೂ ಬಾಲಿವುಡ್ ಡ್ರೀಮ್ ಗರ್ಲ್ ಹೇಮಾಮಾಲಿನಿ ಮಥುರಾ ಜಂಕ್ಷನ್ ಫ್ಲಾಟ್'ಫಾರ್ಮ್ ಬಳಿ ತಿವಿಯಲು ಬಂದ ಗೂಳಿಯಿಂದ ಪಾರಾದ ಘಟನೆ ನಡೆದಿದೆ.
ಉತ್ತರ ಪ್ರದೇಶದ ಮಥುರಾ ರೈಲು ನಿಲ್ದಾಣದಲ್ಲಿನ ಮೂಲ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಲು ಹಾಗೂ ಮುಥುರಾವನ್ನು ಪ್ರವಾಸಿ ಸ್ನೇಹಿಯಾಗಿಸುವ ಉದ್ದೇಶದಿಂದ ಹೇಮಾ ಮಾಲಿನಿ ಬೇಟಿ ನೀಡಿದ್ದರು. ಆಗ ಬೀದಿ ಗೂಳಿಯೊಂದು ನಿಲ್ದಾಣದ ಒಳಕ್ಕೆ ನುಗ್ಗಿ ಬಂದಿದೆ. ಅದೃಷ್ಟಾವಶಾತ್ ಹೇಮಾಮಾಲಿನಿ ಕೂದಲೆಳೆ ಅಂತರದಲ್ಲಿ ಗೂಳಿಯಿಂದ ಪಾರಾಗಿದ್ದಾರೆ. ಹೇಮಾ ಮಾಲನಿಗೆ ಯಾವುದೇ ಗಾಯವಾಗಿಲ್ಲ ಎಂದು ವರದಿಯಾಗಿದೆ.
ಇನ್ನು ಈ ಘಟನೆಗೆ ಸಂಬಂಧಿಸಿದಂತ ಪ್ಲಾಟ್ ಫಾರ್ಮನಲ್ಲಿ ಭದ್ರತಾ ಲೋಪದ ಹಿನ್ನೆಲೆಯಲ್ಲಿ ಜಂಕ್ಷನ್ ಮಾಸ್ಟರ್'ರನ್ನು ಸಸ್ಪೆಂಡ್ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.