
ನವದೆಹಲಿ(ಜು.13): ಸ್ವಚ್ಛ ಭಾರತ ಅಭಿಯಾನ್ ಕೇವಲ ಕಾಗದದ ಮೇಲೆ ಯಶಸ್ವಿಯಾಗಿದೆ ಎಂಬುದು ಅದರ ವಿರೋಧಿಗಳ ಅಂಬೋಣ. ಸಾಧಿಸಿದ್ದೇನು, ಸಾಧಿಸಬೇಕಾಗಿರುವುದೇನು ಎಂಬುದರ ಕುರಿತಷ್ಟೇ ಪ್ರಧಾನಿ ಮೋದಿ ಯೋಚಿಸುವುದು.
ಅದರಂತೆ ಕಳೆದ 5 ವರ್ಷದಲ್ಲಿ ಸ್ವಚ್ಛ ಭಾರತ ಅಭಿಯಾನದಡಿ ಅನೇಕ ಸಾಧನೆಗಳನ್ನು ಮಾಡಲಾಗಿದೆ. ಭವಿಷ್ಯದಲ್ಲಿ ಇನ್ನೂ ಅನೇಕ ಸಾಧನೆಗಳು ಈ ಯೋಜನೆಯಡಿ ಮೂಡಿ ಬರಲಿವೆ ಎಂಬುದೂ ಖಚಿತ.
ಅದರಂತೆ ಇಂದು ಸಂಸತ್ತಿನಲ್ಲಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದರು ಅತ್ಯಂತ ಉತ್ಸುಕರಾಗಿ ಭಾಗವಹಿಸಿದ್ದು, ಸಂಸತ್ತಿನ ಆವರಣವನನು ಸ್ವಚ್ಛಗೊಳಿಸುವ ಮೂಲಕ ಗಮನ ಸೆಳದರು.
ಪ್ರಮುಖವಾಗಿ ಬಿಜೆಪಿಯ ಮಥುರಾ ಲೋಕಸಭಾ ಕ್ಷೇತ್ರದ ಸಂಸದೆ ಹೇಮಾ ಮಾಲಿನಿ, ಪೊರಕೆ ಹಿಡಿದು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ಬಿಜೆಪಿಯ ಮತ್ತೋರ್ವ ಸಂಸದ ಅನುರಾಗ್ ಠಾಕೂರ್ ಅವರೊಂದಿಗೆ ಸೇರಿ ಹೇಮಾ ಮಾಲಿನಿ ಸಂಸತ್ತಿನ ಆವರಣವನ್ನು ಸ್ವಚ್ಛಗೊಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.