
ಹಾಸನ(ಸೆ.13): ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವುವರಿಂದಾಗಿ ಹೇಮಾವತಿ ಜಲಾಶಯದಲ್ಲಿ ನೀರು ಬರಿದಾಗಿದ್ದು, ಇಡೀ ಡ್ಯಾಮ್ ಖಾಲಿ-ಖಾಲಿ ಎನ್ನಿಸುತ್ತಿದೆ.
ಹಾಸನ ಜಿಲ್ಲೆಯ ಗೊರೂರಿನಲ್ಲಿರುವ ಹೇಮಾವತಿ ಜಲಾಶಯದಿಂದ ತಮಿಳುನಾಡಿಗೆ ರಾಜ್ಯ ಸರಕಾರ ನೀರು ಹರಿಸುತ್ತಿದ್ದು, ಈ ಹಿನ್ನಲೆಯಲ್ಲಿ ಕಾವೇರಿ ಕೊಳ್ಳದ ಪ್ರಮುಖ ನದಿ ಹೇಮಾವತಿ ಬರಿದಾಗುತ್ತಿದೆ. ಇದು ಈ ಭಾಗದ ಜನರಲ್ಲಿ ಆತಂಕ ಸೃಷ್ಠಿಸಿದೆ.
ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಮುನ್ನ ಜಲಾಶಯದಲ್ಲಿ 17 ಟಿಎಂಸಿ ನೀರಿತ್ತು, ಸದ್ಯ ಹೇಮಾವತಿ ಜಲಾಶಯದಲ್ಲಿ 7 ಟಿಎಂಸಿ ನೀರು ಖಾಲಿಯಾಗಿದ್ದು, ಇಂದು ಹೇಮಾವತಿ ಡ್ಯಾಂನಲ್ಲಿ ಕೇವಲ 10 ಟಿಎಂಸಿ ನೀರಿದೆ. ಆದರೆ ಇದರಲ್ಲಿ ಬಳಕೆ ಮಾಡಬಹುದಾದ ನೀರು 6 ಟಿಎಂಸಿ ಮಾತ್ರ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.