
ಬೆಂಗಳೂರು(ಫೆ.19): ವಿಶ್ವಪ್ರಸಿದ್ಧ, ಬೆಂಗಳೂರಿನ ಹೆಮ್ಮೆ ಎನಿಸಿಕೊಂಡಿರುವ ಪ್ರತಿಷ್ಠಿತ ಬೆಂಗಳೂರು ಏರ್ ಶೋ ನಾಳೆ(ಫೆ.20) ಉದ್ಘಾಟನೆಗೊಳ್ಳಲಿದೆ. ಯಲಹಂಕ ವೈಮಾನಿಕ ವಾಯುನೆಲೆಯಲ್ಲಿ ನಡೆಯಲಿರುವ ಏರೋ ಇಂಡಿಯಾ ಶೋಗೆ ಭಿಗಿ ಭದ್ರತೆ ಒದಗಿಸಲಾಗಿದೆ. ಪುಲ್ವಾಮ ದಾಳಿಯಿಂದಾಗಿ ಸಂಪೂರ್ಣ ಏರ್ ಶೋ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
ಇದನ್ನೂ ಓದಿ: ಏರ್ ಶೋ ಪ್ರಾಯೋಗಿಕ ಪ್ರದರ್ಶನ ಆರಂಭ
ಏರೋ ಇಂಡಿಯಾ ಶೋ ಯಾವಾಗ?
ಲೋಹದ ಹಕ್ಕಿಗಳ ಹಾರಾಟಕ್ಕೆ ಕೌಂಟ್ಡೌನ್ ಶುರುವಾಗಿದೆ. ಫೆ.20 ರಿಂದ 24ವರೆಗೆ ನಡೆಯಲಿರುವ ಏರ್ ಶೋನಲ್ಲಿ 31 ವಿಮಾನಗಳು ಆಗಸದಲ್ಲಿ ಚಿತ್ತಾರ ಮೂಡಿಸಲಿದೆ. ಬೆಳಗ್ಗೆ 10 ರಿಂದ 12ರ ವರೆಗೆ ಮೊದಲ ಭಾಗ ಹಾಗೂ ಮಧ್ಯಾಹ್ನ 2 ರಿಂದ ಸಂಜೆ 5ರ ವರೆಗೆ ಎರಡನೇ ಭಾಗದ ವೈಮಾನಿಕ ಪ್ರದರ್ಶನ ನಡೆಯಲಿದೆ. ದೇಶಿ ಹಾಗೂ ವಿದೇಶಿ ವಿಮಾನಗಳು ಹಾರಾಟ ನಡೆಸಲಿದೆ.
ತಲಪುವುದು ಹೇಗೆ?
ಇದನ್ನೂ ಓದಿ: ಬೆಂಗಳೂರಿಗೆ ಬಂತು ರಫೆಲ್, ಬಾನಂಗಳದಲ್ಲಿ ಲೋಹದ ಹಕ್ಕಿಗಳ ಚಿತ್ತಾರ
ಸುಖೋಯ್ 30 ಫೈಟರ್ ಜೆಟ್, ಫ್ರೆಂಚ್ ಫೈಟರ್ ಏರ್ಕ್ರಾಫ್ಟ್ ರಾಫೆಲ್, ಬ್ರಿಟನ್ ಮೂಲದ ಯಕೋಲ್ವ್ಸ್, ಭಾರತೀಯ ಸೇನೆಯ ಧ್ರುವ ಹೆಲಿಕಾಪ್ಟರ್, ಭಾರತೀಯ ವಾಯು ಸೇನೆಯ ಸೂರ್ಯಕಿರಣ, ತೇಜಸ್ ಏರ್ಕ್ರಾಫ್ಟ್ ವಿಮಾನಗಳು ಈ ಭಾರಿಯ ಏರೋ ಇಂಡಿಯಾ ಶೋನಲ್ಲಿನ ಪ್ರಮುಖ ಹೈಲೈಟ್ಸ್.
ಟಿಕೆಟ್ ಎಲ್ಲಿ?:
ಸುಂದರ ಏರ್ ಶೋ ಹಾರಾಟ ವೀಕ್ಷಿಸಲು ಸಾರ್ವಜನಿಕರಿಗೆ ಅವಕಾಶವಿದೆ. ಬೆಂಗಳೂರು ಏರ್ಶೋ ಟಿಕೆಟ್ ಖರೀದಿಸಿ ಲೋಹದ ಹಕ್ಕಿಗಳ ಹಾರಾಟ ವೀಕ್ಷಿಸಬಹುದಾಗಿದೆ. ಆನ್ಲೈನ್ ಮೂಲಕ ಬುಕ್ ಮಾಡ ಬಯಸುವವರು ಬುಕ್ಮೈ ಶೋ(bookmyshow)ಮೂಲಕ ಟಿಕೆಟ್ ಖರೀದಿಸಬಹುದು. ಇನ್ನು ಭದ್ರತೆ ದೃಷ್ಟಿಯಿಂದ ಡ್ರೋನ್ ಕ್ಯಾಮಾರ ನಿಷೇಧಿಸಲಾಗಿದೆ. ಇಷ್ಟೇ ಅಲ್ಲ ಬಲೂನ್ಗಳನ್ನೂ ನಿಷೇಧಿಸಲಾಗಿದೆ.
ಇದನ್ನೂ ಓದಿ: ಹೀನಾ ಜೈಸ್ವಾಲ್ ಭಾರತದ ಮೊದಲ ಮಹಿಳಾ ಫ್ಲೈಟ್ ಇಂಜಿನಿಯರ್
ಪಾರ್ಕಿಂಗ್ ನಿಷೇಧ:
ಯಲಹಂಕ ವಾಯುನೆಲೆ ಹೈವೇ ಬದಿಗಳಲ್ಲಿ ವಾಹನಗಳನ್ನ ಪಾರ್ಕ್ ಮಾಡುವುದು ಕೂಡ ನಿಷೇಧಿಸಲಾಗಿದೆ. ಮೇಕ್ರಿ ಸರ್ಕಲ್, ಹೆಬ್ಬಾಳ ಫ್ಲೈ ಓವರ್ ಮೂಲಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಯಲಹಂಕ ವೈಮಾನಿಕ ವಾಯುನೆಲೆಗೆ ತೆರಳುವ ಮಾರ್ಗಗಳನ್ನ ಡೈವರ್ಟ್ ಮಾಡಲಾಗುವುದು. ಬೆಳಗ್ಗೆ 7 ಗಂಟೆಯಿಂದ ರಾತ್ರಿ 7 ಗಂಟೆವರೆಗೆ ಈ ರಸ್ತೆಗಳಲ್ಲಿ ಮಾರ್ಗ ಬದಲಾವಣೆ ಮಾಡಲಾಗುವುದು ಎಂದು ನಗರ ಪೊಲೀಸ್ ಕಮೀಶನರ್ ಟಿ ಸುನೀಲ್ ಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ: ಏರ್ ಶೋ ಎಫೆಕ್ಟ್: ಬೆಂಗ್ಳೂರಲ್ಲಿ 2ನೇ ಟಿ20, ಮೊದಲ ಪಂದ್ಯಕ್ಕೆ ವೈಝಾಗ್ ಆತಿಥ್ಯ!
ಏರ್ ಶೋ ಕಾರಣದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತೆರಳೋ ವಿಮಾನಗಳ ಸಮಯ ಬದಲಾವಣೆಯಾಗಲಿದೆ. 1996ರಲ್ಲಿ ಮೊದಲ ಬಾರಿಗೆ ಯಲಹಂಕಾ ವಾಯುನೆಲಯಲ್ಲಿ ಏರ್ ಶೋ ಆಯೋಜಿಸಲಾಗಿತ್ತು. ಇದೀಗ 11 ಆವೃತ್ತಿಗಳನ್ನ ಯಶಸ್ವಿಯಾಗಿ ಪೂರೈಸಿರುವ ಬೆಂಗಳೂರು ಏರ್ ಶೋ ಇದೀಗ 12ನೇ ಆವೃತ್ತಿಗೆ ಸಜ್ಜಾಗಿದೆ. ಆದರೆ ಏರ್ ಶೋ ಆರಂಭಕ್ಕೂ ಮುನ್ನವೇ ತಾಲೀಮು ನಡೆಸುತ್ತಿದ್ದ ಎರಡು ಸೂರ್ಯಕಿರಣ ಲಘು ವಿಮಾನಗಳು ಅಪಘಾತಕ್ಕೀಡಾಗಿರುವುದು ಆತಂತಕ್ಕೆ ಕಾರಣವಾಗಿದೆ.
ಇದನ್ನೂ ಓದಿ: ಏರ್ ಶೋ ವಿಮಾನ ಅಪಘಾತ: ಓರ್ವ ಪೈಲೆಟ್ ಸಾವು!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ