
ಬೆಂಗಳೂರು(ಜೂ.9): ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕುರಿತು ನಡೆಸಿದ ಸಮೀಕ್ಷೆ ಎಲ್ಲರಿಗೂ ಗೊತ್ತಿರುವ ಸಂಗತಿ. ಆರ್ಬಿಐ ನಡೆಸಿದ ಸಮೀಕ್ಷೆಯಲ್ಲಿ ಮೋದಿ ಸರ್ಕಾರದ ಕುರಿತು ಜನಸಾಮಾನ್ಯರಲ್ಲಿ ಅಸಮಾಧಾನವಿದೆ ಎಂಬುದು ಮೇಲ್ನೋಟಕ್ಕೆ ಕಂಡುಕೊಂಡ ಸತ್ಯವಾಗಿತ್ತು.
ಆದರೆ ಈ ಸಮೀಕ್ಷೆ ಸಂಪೂರ್ಣ ಜನರ ಅಭಿವ್ಯಕ್ತಿಯೇ ಎಂಬ ಪ್ರಶ್ನೆಯೂ ಇದೇ ವೇಳೆ ಕೇಳಿ ಬಂದಿದ್ದು ಸುಳ್ಳಲ್ಲ. ಆರ್ಬಿಐ ಸವೆರ್ವೆ ನಡೆಸಿದ ಪರಿ, ಸರ್ವೆಗಾಗಿ ಅದು ಆಯ್ಕೆ ಮಾಡಿಕೊಂಡ ನಗರಗಳು ಹೀಗೆ ಕೆಲವು ಪ್ರಶ್ನೆಗಳಿಗೆ ಉತ್ತರ ಸಿಗದೇ ಹೋಗಿದ್ದು ಈ ಸಮೀಕ್ಷೆಯ ವಿಪರ್ಯಾಸ.
"
ಈ ಎಲ್ಲ ಪ್ರಶ್ನೆಗಳಿಗೆ ಉತ್ತರವೆಂಬಂತೆ ಬೆಂಗಳೂರಿನ ಪ್ರಸಿದ್ದ ಚಾರ್ಟೆಡ್ ಅಕೌಂಟೆಂಟ್ ಆಗಿರುವ ಬಿಎನ್ ಮೋಹನ್ ಅವರು, ಆರ್ಬಿಐ ಸಮೀಕ್ಷೆಯಲ್ಲಿನ ಧನಾತ್ಮಕ ಮತ್ತು ಋಣಾತ್ಮಕ ಅಂಶಗಳನ್ನು ಎತ್ತಿ ತೋರಿಸಿದ್ದಾರೆ. ಆರ್ಬಿಐ ಸಮೀಕ್ಷೆ ಕುರಿತಂತೆ ಬಿಎನ್ ಮೋಹನ್ ಏನು ಹೇಳಿದರು ಎಂಬುದನ್ನು ನೀವೆ ನೋಡಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.