ಸ್ವಂತದೊಂದು ಸೂರು ಕಟ್ಟಿದಾಕ್ಷಣ ಕುಲ ದೇವರು, ವಂಶದ ಹೆಸರು ಅಥವಾ ತಮ್ಮ ಅಭಿರುಚಿಗೆ ತಕ್ಕಂತಹ ಹೆಸರು ಇರಿಸುವುದು ಸಹಜ. ಆದರೆ ರಾಮನಗರ ಜಿಲ್ಲೆ, ಚನ್ನಪಟ್ಟಣ ತಾಲೂಕಿನ ಯಲಿಯೂರು ಗ್ರಾಮದ ಮಾದಯ್ಯ ಶೆಟ್ಟಿ ಹೊಸದಾಗಿ ನಿರ್ಮಿಸಿರುವ ತಮ್ಮ ಮನೆಗೆ ‘ಶ್ರೀ ಮೋದಿ ನಿಲಯ’ ಎಂದು ಹೆಸರಿಟ್ಟು ಅಭಿಮಾನ ಮೆರೆದಿದ್ದಾರೆ. ಅಲ್ಲದೇ ಆ.6 ರಂದು ನಡೆಯಲಿರುವ ತಮ್ಮ ಕನಸಿನ ಮನೆಯ ಗೃಹ ಪ್ರವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿದ್ಷಾ ಅವರಿಗೆ ಆಹ್ವಾನ ನೀಡಿದ್ದಾರೆ. ಪ್ರಧಾನ ಮಂತ್ರಿ ಕಚೇರಿಗೆ ಅಂಚೆ ಮೂಲಕ ಆಹ್ವಾನ ಪತ್ರಿಕೆಯನ್ನು ಕಳುಹಿಸಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನಿಸಿದ್ದೇವೆ ಎನ್ನುತ್ತಾರೆ ಕುಟುಂಬಸ್ಥರು.
ಚನ್ನಪಟ್ಟಣ (ಅ.01): ಸ್ವಂತದೊಂದು ಸೂರು ಕಟ್ಟಿದಾಕ್ಷಣ ಕುಲ ದೇವರು, ವಂಶದ ಹೆಸರು ಅಥವಾ ತಮ್ಮ ಅಭಿರುಚಿಗೆ ತಕ್ಕಂತಹ ಹೆಸರು ಇರಿಸುವುದು ಸಹಜ. ಆದರೆ ರಾಮನಗರ ಜಿಲ್ಲೆ, ಚನ್ನಪಟ್ಟಣ ತಾಲೂಕಿನ ಯಲಿಯೂರು ಗ್ರಾಮದ ಮಾದಯ್ಯ ಶೆಟ್ಟಿ ಹೊಸದಾಗಿ ನಿರ್ಮಿಸಿರುವ ತಮ್ಮ ಮನೆಗೆ ‘ಶ್ರೀ ಮೋದಿ ನಿಲಯ’ ಎಂದು ಹೆಸರಿಟ್ಟು ಅಭಿಮಾನ ಮೆರೆದಿದ್ದಾರೆ. ಅಲ್ಲದೇ ಆ.6 ರಂದು ನಡೆಯಲಿರುವ ತಮ್ಮ ಕನಸಿನ ಮನೆಯ ಗೃಹ ಪ್ರವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿದ್ಷಾ ಅವರಿಗೆ ಆಹ್ವಾನ ನೀಡಿದ್ದಾರೆ. ಪ್ರಧಾನ ಮಂತ್ರಿ ಕಚೇರಿಗೆ ಅಂಚೆ ಮೂಲಕ ಆಹ್ವಾನ ಪತ್ರಿಕೆಯನ್ನು ಕಳುಹಿಸಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನಿಸಿದ್ದೇವೆ ಎನ್ನುತ್ತಾರೆ ಕುಟುಂಬಸ್ಥರು.
ನರೇಂದ್ರ ಮೋದಿ ಪ್ರಧಾನಿಯಾಗಿ ಕೈಗೊಂಡಿರುವ ಅಭಿವೃದ್ಧಿ ಕೆಲಸಗಳೇ ನಮ್ಮ ಮನೆಗೆ ಅವರ ಹೆಸರಿಡಲು ಕಾರಣ. ಗ್ರಾಮೀಣ ಭಾಗದ ಪ್ರತಿಯೊಬ್ಬರು ಸೂರು ಕಟ್ಟಿಕೊಳ್ಳ ಬೇಕೆಂದು ವಸತಿ ಯೋಜನೆಯನ್ನು ಜಾರಿಗೆ ತಂದಿರುವುದು, ಕಾಳಧನವನ್ನು ನಿಯಂತ್ರಿಸುವ ಮೂಲಕ ಬಡವರು ನೆಮ್ಮದಿಯಿಂದ ಬದುಕುವ ವಾತಾವರಣ ನಿರ್ಮಾಣ ಮಾಡಿರುವುದರಿಂದ ನಮ್ಮ ಮನೆಮಂದಿಯೆಲ್ಲ ಮೋದಿ ಅವರ ಬಗ್ಗೆ ಅಭಿಮಾನ ಹೊಂದಿದೆ. ಅದಕ್ಕಾಗಿ ನಮ್ಮ ಮನೆಗೆ ಅವರ ಹೆಸರು ಇರಿಸುತ್ತಿದ್ದೇವೆ ಎಂದು ಕುಟುಂಬ ಸದಸ್ಯರು ‘ಕನ್ನಡಪ್ರಭ’ಕ್ಕೆ ತಿಳಿಸಿದ್ದಾರೆ.
ಮೋದಿಯಂತಹ ಜನಪರ ಪ್ರಧಾನಿಯನ್ನು ಈ ದೇಶ ಹಿಂದೆಯೂ ಕಂಡಿಲ್ಲ, ಮುಂದೆಯೂ ಕಾಣುವುದಿಲ್ಲ. ಇವರು ಕೈಗೊಂಡ ಯೋಜನೆ ಮತ್ತು ನಿರ್ಧಾರದಿಂದಾಗಿ ಶ್ರೀಸಾಮಾನ್ಯ ನೆಮ್ಮದಿಯ ಬದುಕು ಕಾಣುವ ವಾತಾವರಣ ನಿರ್ಮಾಣ ಗೊಂಡಿದೆ. ಇದಕ್ಕಾಗಿ ಅವರ ಹೆಸರನ್ನು ನಮ್ಮ ಮನೆಗೆ ಇರಿಸುತ್ತಿದ್ದೇವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.