ಚಂಡಮಾರುತ ಮುನ್ಸೂಚನೆ: ಎರಡು ರಾಜ್ಯಗಳಿಗೆ ಎಚ್ಚರಿಕೆ ಕೊಟ್ಟ AMD

By Web DeskFirst Published Dec 16, 2018, 8:24 PM IST
Highlights

ಬಂಗಾಳಕೊಲ್ಲಿಯಲ್ಲಿ  ಅಪ್ಪಳಿಸಿರುವ 'ಫೆಥಾಯ್' ಚಂಡಮಾರುತ ಹಿನ್ನಲೆಯಲ್ಲಿ ಎರಡು ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.

ಒಡಿಸ್ಸಾ, [ಡಿ.16]: ವರ್ಧಾ ಚಂಡಮಾರುತಕ್ಕೆ ತತ್ತರಿಸಿದ್ದ ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಮತ್ತೊಂದು ಚಂಡಮಾರುತದ ಭೀತಿ ಎದುರಾಗಿದೆ.

ಬಂಗಾಳಕೊಲ್ಲಿಯಲ್ಲಿ  ಅಪ್ಪಳಿಸಿರುವ 'ಫೆಥಾಯ್' ಚಂಡಮಾರುತ ಈಗ ಆಂಧ್ರ ಮತ್ತು ಚೆನ್ನೈನ ತಮಿಳುನಾಡಿನ ಕರಾವಳಿ ಪ್ರದೇಶಗಳ ಕಡೆಗೆ ಸಾಗುತ್ತಿದೆ. ಈ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ರಾಷ್ಟ್ರೀಯ ವಿಪತ್ತು ಪಡೆ ಎಚ್ಚರಿಸಿದೆ.

 ಚಂಡಮಾರುತವು ಸೋಮವಾರ ಓಂಗೋಲ್ ಮತ್ತು ಕಾಕಿನಾಡದ ನಡುವೆ ಕರಾವಳಿ ದಾಟುವ ಸಾಧ್ಯತೆ ಇದೆ.  ದಕ್ಷಿಣ ಆಂಧ್ರಪ್ರದೇಶ, ಉತ್ತರ ತಮಿಳುನಾಡು ಮತ್ತು ಪುದುಚೇರಿ ಕರಾವಳಿಯಲ್ಲಿ 45-55 ಕಿ.ಮೀ. ಮತ್ತು 65 ಕಿ.ಮೀ. ವೇಗದಲ್ಲಿ ಚಂಡಮಾರುತ ಧಾವಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

CS "PHETHAI" near 12.2N/83.9E at 1130 hrs IST of 16th. About 560 km south-southeast of Kakinada (Andhra Pradesh). Details at https://t.co/wRl94BzRXr pic.twitter.com/zGSsnVIXfe

— India Met. Dept. (@Indiametdept)

ಅಷ್ಟೇ ಅಲ್ಲದೇ ಇಂದು [ಭಾನುವಾರ] ಮತ್ತು ನಾಳೆ [ಸೋಮವಾರ] ಆಂಧ್ರಪ್ರದೇಶ ಕರಾವಳಿಯಿಂದ ಮೀನುಗಾರಿಕೆ ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ರದ್ದುಪಡಿಸಬೇಕೆಂದು ಐಎಂಡಿ ಕರೆ ಸೂಚಿಸಿದೆ. ಈ ಚಂಡಮಾರುತದಿಂದಾಗಿ ತಮಿಳುನಾಡು ಮತ್ತು ಆಂಧ್ರ ಪ್ರದೇಶ ಕೆಲ ಭಾಗದ ಜನರಿಗೆ ಆತಂಕ ಸೃಷ್ಟಿ ಮಾಡಿದೆ.

click me!