ಸವದಿಗೆ ಡಿಸಿಎಂ ಸ್ಥಾನ : ಯಡಿಯೂರಪ್ಪಗೆ ಶಾಕ್‌

Published : Aug 27, 2019, 10:28 AM IST
ಸವದಿಗೆ ಡಿಸಿಎಂ ಸ್ಥಾನ :  ಯಡಿಯೂರಪ್ಪಗೆ ಶಾಕ್‌

ಸಾರಾಂಶ

ಲಕ್ಷ್ಮಣ್ ಸವದಿಗೆ ಸಚಿವ ಸ್ಥಾನ ಹಾಗೂ ಉಪ ಮುಖ್ಯಮಂತ್ರಿ ಸ್ಥಾನ ನೀಡುವ ಬಗ್ಗೆ ವರಿಷ್ಠರೇ ಸೂಚಿಸಿದ್ದು ಇದು ಸ್ವತಃ ಸಿಎಂ ಯಡಿಯೂರಪ್ಪ ಅವರಿಗೂ ಶಾಕ್ ಆಗಿತ್ತು. 

ಬೆಂಗಳೂರು [ಆ.27]: ಸಚಿವ ಸ್ಥಾನಕ್ಕೆ ಲಕ್ಷ್ಮಣ್ ಸವದಿ ಅವರ ಹೆಸರು ಪ್ರಸ್ತಾಪವಾದ ಬಳಿಕ ಯಡಿಯೂರಪ್ಪ ಅವರೂ ಶಾಕ್‌ಗೊಳಗಾದರು. ಸೋತವರಿಗೆ ಯಾಕೆ ಸಚಿವ ಸ್ಥಾನ ನೀಡಬೇಕು ಎಂಬುದು ಅವರ ಪ್ರಶ್ನೆಯಾಗಿತ್ತು. 

ಆದರೆ, ನಮ್ಮ ಸೂಚನೆಯನ್ನು ಪಾಲಿಸಿ ಎಂದಷ್ಟೇ ಹೇಳಿದ ವರಿಷ್ಠರು ನಂತರ ಸವದಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನೂ ನೀಡಬೇಕು ಎಂದಾಗ ಮಾತ್ರ ಯಡಿಯೂರಪ್ಪ ಆಘಾತಕ್ಕೊಳಗಾದರು ಎಂದು ತಿಳಿದು ಬಂದಿದೆ. 

ರಾಜ್ಯ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಆದರೆ, ವರಿಷ್ಠರ ಸೂಚನೆಯನ್ನು ಧಿಕ್ಕರಿಸುವಂತಿಲ್ಲ. ಸಂಘ ಪರಿವಾರದ ಮುಖಂಡರ ಮೂಲಕ ಸವದಿ ಅವರ ಬಗ್ಗೆ ಹೈಕಮಾಂಡ್‌ ಬಳಿ ಪ್ರಸ್ತಾಪಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಅಂತಿಮವಾಗಿ ಲಕ್ಷ್ಮಣ ಸವದಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಕೊಡಲೇಬೇಕಾಯಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಿಲಯನ್ಸ್‌ ಪವರ್‌, 10 ಮಂದಿ ವಿರುದ್ಧ ಇ.ಡಿ.ಚಾರ್ಜ್‌ಶೀಟ್‌
ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ