ನನ್ನ ಚುನಾವಣೆ ಸ್ಪರ್ಧೆ ಬಗ್ಗೆ ಶೀಘ್ರ ವರಿಷ್ಠರ ನಿರ್ಧಾರ: ಅನಿತಾ

Published : Oct 21, 2017, 04:04 PM ISTUpdated : Apr 11, 2018, 12:54 PM IST
ನನ್ನ ಚುನಾವಣೆ ಸ್ಪರ್ಧೆ ಬಗ್ಗೆ ಶೀಘ್ರ ವರಿಷ್ಠರ ನಿರ್ಧಾರ: ಅನಿತಾ

ಸಾರಾಂಶ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವ ಸಂಬಂಧ ಪಕ್ಷ ರಾಷ್ಟ್ರೀಯ ಅಧ್ಯಕ್ಷರು ಮತ್ತು ರಾಜ್ಯಾಧ್ಯಕ್ಷರು ತೀರ್ಮಾನಿಸಲಿದ್ದು, ಈ ಕುರಿತ ಕುತೂಹಲಕ್ಕೆ ಶೀಘ್ರವೇ ತೆರೆ ಬೀಳಲಿದೆ ಎಂದು ಮಾಜಿ ಶಾಸಕಿ ಅನಿತಾ ಕುಮಾರ ಸ್ವಾಮಿ ಸ್ವಷ್ಟಪಡಿಸಿದರು.

ಹಾಸನ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವ ಸಂಬಂಧ ಪಕ್ಷ ರಾಷ್ಟ್ರೀಯ ಅಧ್ಯಕ್ಷರು ಮತ್ತು ರಾಜ್ಯಾಧ್ಯಕ್ಷರು ತೀರ್ಮಾನಿಸಲಿದ್ದು, ಈ ಕುರಿತ ಕುತೂಹಲಕ್ಕೆ ಶೀಘ್ರವೇ ತೆರೆ ಬೀಳಲಿದೆ ಎಂದು ಮಾಜಿ ಶಾಸಕಿ ಅನಿತಾ ಕುಮಾರ ಸ್ವಾಮಿ ಸ್ವಷ್ಟಪಡಿಸಿದರು.

ನಗರದಲ್ಲಿ ಶುಕ್ರವಾರ ಹಾಸನಾಂಬ ತಾಯಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ಹಾಗೂ ರಾಜಾಧ್ಯಕ್ಷ ಕುಮಾರಸ್ವಾಮಿ ಕೈಗೊಳ್ಳುವ ನಿರ್ಧಾರಕ್ಕೆ ತಾನು ಬದ್ಧಳಾಗಿದ್ದು ಸಮಯ ಬಂದಾಗ ಎಲ್ಲವೂ ತಿಳಿಯುತ್ತದೆ ಎಂದರು.

ಎಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯ ಸುಧಾರಿಸಿದ್ದು ನ.3ರಿಂದ ಮೈಸೂರಿನಿಂದಲೇ ಚುನಾವಣಾ ಪ್ರಚಾರ ಪ್ರಾರಂಭಿಸುವ ಮೂಲಕ ರಾಜ್ಯಾಧ್ಯಕ್ಷ ಎಚ್. ಡಿ.ಕುಮಾರಸ್ವಾಮಿ ರಾಜ್ಯ ಪ್ರವಾಸ ಮಾಡಲಿದ್ದಾರೆ. ಅದೇ ರೀತಿ ಪುತ್ರ ನಿಖಿಲ್ ಕೂಡ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದು ಎರಡು ತಿಂಗಳು ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದಾರೆ ಎಂದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!
ದೇಶ ವಿಭಜನೆ ಬಳಿಕ ಮೊದಲ ಬಾರಿಗೆ ಪಾಕಿಸ್ತಾನ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತ ಕೋರ್ಸ್