ಕಾಂಗ್ರೆಸ್ ಶಾಸಕ ಮುನಿರತ್ನಗೆ ಸಂಕಷ್ಟ

Published : Dec 15, 2018, 09:12 AM ISTUpdated : Dec 15, 2018, 09:31 AM IST
ಕಾಂಗ್ರೆಸ್ ಶಾಸಕ ಮುನಿರತ್ನಗೆ ಸಂಕಷ್ಟ

ಸಾರಾಂಶ

ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನಗೆ ಇದೀಗ ಸಂಕಷ್ಟ ಎದುರಾಗಿದೆ. ಬೋಗಸ್‌ ಬಿಲ್‌ ಸೃಷ್ಟಿಸಲು ಯತ್ನಿಸಿದ ಪ್ರಕರಣದಲ್ಲಿ ಶಾಸಕ ಜಿ.ಮುನಿರತ್ನ ಅವರಿಗೆ ನೋಟಿಸ್‌ ಜಾರಿ ಮಾಡಲಾಗಿದೆ. 

ಬೆಂಗಳೂರು :  ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ .120 ಕೋಟಿ ಮೊತ್ತದ ಸಿವಿಲ್‌ ಕಾಮಗಾರಿ ಸಂಬಂಧ ಬೋಗಸ್‌ ಬಿಲ್‌ ಸೃಷ್ಟಿಸಲು ಯತ್ನಿಸಿದ ಪ್ರಕರಣದಲ್ಲಿ ಶಾಸಕ ಜಿ.ಮುನಿರತ್ನ ಅವರಿಗೆ ನೋಟಿಸ್‌ ಜಾರಿ ಮಾಡಿರುವ ಹೈಕೋರ್ಟ್‌ ಪ್ರಕರಣ ಕುರಿತು ಲೋಕಾಯುಕ್ತ ವಿಶೇಷ ನ್ಯಾಯಾಲಯದ ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಪ್ರಕರಣದಲ್ಲಿ ಶಾಸಕ ಜಿ.ಮುನಿರತ್ನ, ಪತ್ನಿ ಮಂಜುಳಾ ಹಾಗೂ ಸೂರಪ್ಪ ಬಾಬು ಅವರನ್ನು ಪ್ರಕರಣದಲ್ಲಿ ಸಹ ಆರೋಪಿಗಳನ್ನಾಗಿ ಮಾಡಲು ಕೋರಿದ್ದ ಮಧ್ಯಂತರ ಅರ್ಜಿ ವಜಾಗೊಳಿಸಿದ್ದ ಲೋಕಾಯುಕ್ತ ವಿಶೇಷ ಕೋರ್ಟ್‌ ಆದೇಶ ರದ್ದುಪಡಿಸುವಂತೆ ಕೋರಿ ವಕೀಲ ಎನ್‌.ಪಿ.ಅಮೃತೇಶ್‌ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್‌.ದಿನೇಶ್‌ ಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ.

ರಾಜ್‌ಕುಮಾರ್ಗಿಲ್ಲದ ಜಾತಿ ಸುದೀಪ್‌ಗೇಕೆ: ಮುನಿರತ್ನ

ಅಲ್ಲದೆ, ಪ್ರಕರಣ ಸಂಬಂಧ ಲೋಕಾಯುಕ್ತ ಕೋರ್ಟ್‌ಗೆ ಸಲ್ಲಿಸಿದ್ದ ದೋಷಾರೋಪ ಪಟ್ಟಿಯಲ್ಲಿ ಮುನಿರತ್ನ ಅವರ ಹೆಸರನ್ನು ಏಕೆ ಕೈ ಬಿಡಲಾಯಿತು ಎಂಬ ಬಗ್ಗೆ ವಿವರಣೆ ನೀಡಿ ಪ್ರಮಾಣಪತ್ರ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ನ್ಯಾಯಪೀಠ ಇದೇ ವೇಳೆ ನಿರ್ದೇಶಿಸಿದೆ. ಜತೆಗೆ, ಈ ಅರ್ಜಿಯ ಮುಂದಿನ ವಿಚಾರಣೆವರೆಗೆ ಪ್ರಕರಣ ಕುರಿತ ಲೋಕಾಯುಕ್ತ ಕೋರ್ಟ್‌ ವಿಚಾರಣೆಗೆ ತಡೆನೀಡಿದ ಹೈಕೋರ್ಟ್‌, ಶನಿವಾರಕ್ಕೆ ವಿಚಾರಣೆ ಮುಂದೂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
ಅನುದಾನ ಬೇಕಾದ್ರೆ ನಾಟಿ ಕೋಳಿ ಅಡುಗೆ ಮಾಡಬೇಕಾ? ರಾಜ್ಯ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆ