
ಬೆಂಗಳೂರು, [ನ.02]: ನಟಿ ಶ್ರುತಿ ಹರಿಹರನ್ ದಾಖಲಿಸಿದ್ದ MeToo ಎಫ್ಐಆರ್ ರದ್ದು ಕೋರಿ ನಟ ಅರ್ಜುನ್ ಸರ್ಜಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ಇಂದು [ಶುಕ್ರವಾರ] ಹೈಕೋರ್ಟ್ನ ಏಕ ಸದಸ್ಯ ಪೀಠದಲ್ಲಿ ನ್ಯಾಯಮೂರ್ತಿ ಪಿ.ದಿನೇಶ್ ಕುಮಾರ್ ನೇತೃತ್ವದಲ್ಲಿ ವಿಚಾರಣೆ ನಡೆದಿದ್ದು, ನಟ ಅರ್ಜುನ್ ಸರ್ಜಾ ಪರ ಹಿರಿಯ ವಕೀಲರಾದ ಬಿ.ವಿ.ಆಚಾರ್ಯ ಹಾಗೂ ನಟಿ ಶ್ರುತಿ ಹರಿಹರನ್ ಪರ ಬಾಲನ್ ವಾದ ಮಂಡಿಸಿದರು.
ಬಿ.ವಿ.ಆಚಾರ್ಯ ಅವರ ವಾದ ಆಲಿಸಿದ ಕೋರ್ಟ್, ನವೆಂಬರ್ 14ಕ್ಕೆ ಮುಂದೂಡಿತು. ಅಷ್ಟೇ ಅಲ್ಲದೇ ಮುಂದಿನ ವಿಚಾರಣೆವರೆಗೂ ಆರೋಪಿಯನ್ನ [ಅರ್ಜುನ್ ಸರ್ಜಾ] ಬಂಧಿಸದಂತೆ ಪೊಲೀಸರಿಗೆ ಹೈಕೋರ್ಟ್ ಆದೇಶಿಸಿದೆ.
#MeToo:‘ರಿಹರ್ಸಲ್ ವೇಳೆ ಏನೋ ಟಚ್ ಆಗಿರಬಹುದು, ಸರಿ ಮಾಡ್ಕೊಳ್ಳಿ’
ಶ್ರುತಿ ಹರಿಹರನ್ ಅವರು ಅರ್ಜುನ್ ಸರ್ಜಾ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನು ರದ್ದು ಕೋರಿ ಅರ್ಜುನ್ ಸರ್ಜಾ ಹೈಕೋರ್ಟ್ ಮೇಟ್ಟಿಲೇರಿದ್ದಾರೆ.
ಎಲ್ಲಾ ವಿವಾದ ಅಕ್ಟೋಬರ್ 20 ರಿಂದ ಆರಂಭವಾಗಿದ್ದು, ಈ ಪ್ರಕರಣದಲ್ಲಿ ಅರ್ಜುನ್ ಸರ್ಜಾಗೆ ಜಯವಾಗುತ್ತಾ? ಅಥವಾ ಶೃತಿ ಹರಿಹರನ್ ಮೇಲುಗೈ ಸಾಧಿಸುತ್ತಾರಾ ಎನ್ನುವುದನ್ನ ಕಾದು ನೋಡಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.