
ಬೆಂಗಳೂರು(ನ.3): ಟಿಪ್ಪು ಜಯಂತಿ ಆಚರಣೆ ಪ್ರಶ್ನಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್, ಕಾರ್ಯಾಂಗದ ನಿರ್ಧಾರದಲ್ಲಿ ನ್ಯಾಯಾಂಗ ತಲೆ ಹಾಕಲ್ಲ ಎಂದಿದೆ. ಇದೇ ವೇಳೆ ರಾಜ್ಯ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಲು ಅರ್ಜಿದಾರರಿಗೆ ಸೂಚನೆ ನೀಡಿದೆ. ಕೊಡಗು ಮೂಲದ ಕೆ.ಪಿ ಮಂಜುನಾಥ್ ಎಂಬಾತ ಟಿಪ್ಪು ಜಯಂತಿ ಆಚರಣೆ ರದ್ದು ಕೋರಿ ಅರ್ಜಿ ಸಲ್ಲಿಸಿದ್ದರು. ಟಿಪ್ಪು ಜಯಂತಿ ಸರ್ಕಾರ ನಿರ್ಧಾರ ಆಗಿರುವುದರಿಂದ ಸರ್ಕಾರದ ಮುಂದೆ ಮನವಿ ಮಾಡಿಕೊಳ್ಳುವುದು ಸೂಕ್ತ ಎಂದು ಅಭಿಪ್ರಾಯ ಪಟ್ಟಿರುವ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಅವರನ್ನೊಳಗೊಂಡ ವಿಭಾಗೀಯ ಪೀಠ ಸರ್ಕಾರ ಮನವಿ ಪುರಸ್ಕರಿಸುವಂತೆ ಸೂಚಿಸಿದೆ. ಅಲ್ಲದೆ, ಟಿಪ್ಪು ಜಯಂತಿ ಆಚರಣೆ ನವೆಂಬರ್ 10 ಮತ್ತು 11 ರಂದು ಹಮ್ಮಿಕೊಂಡಿರುವುದರಿಂದ 8ನೇ ತಾರೀಕ್ ಮುಖ್ಯ ನ್ಯಾಯಮೂರ್ತಿ ನಿಲುವು ತಿಳಿಸುವಂತೆ ಸೂಚಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.