ಶಾಮನೂರು ಒಡೆತನದ ಎಸ್.ಎಸ್. ಆಸ್ಪತ್ರೆ ವಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ

Published : Oct 20, 2016, 02:54 PM ISTUpdated : Apr 11, 2018, 01:05 PM IST
ಶಾಮನೂರು ಒಡೆತನದ ಎಸ್.ಎಸ್. ಆಸ್ಪತ್ರೆ ವಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ

ಸಾರಾಂಶ

ಸರ್ಕಾರಿ ಭೂಮಿ ಒತ್ತುವರಿ ಮಾಡಿ ಆಸ್ಪತ್ರೆ ನಿರ್ಮಿಸಿರುವ ಆರೋಪದ ಹಿನ್ನೆಲೆಯಲ್ಲಿ ಸರ್ಕಾರ ತನ್ನ ವಶಕ್ಕೆ ಪಡೆಯಲು ಮುಂದಾಗಿತ್ತು.

ಬೆಂಗಳೂರು(ಅ.20): ರಾಜರಾಜೇಶ್ವರಿನಗರದಲ್ಲಿರುವ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಒಡೆತನದ  ಎಸ್.ಎಸ್. ಆಸ್ಪತ್ರೆ ವಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಸರ್ಕಾರಿ ಭೂಮಿ ಒತ್ತುವರಿ ಮಾಡಿ ಆಸ್ಪತ್ರೆ ನಿರ್ಮಿಸಿರುವ ಆರೋಪದ ಹಿನ್ನೆಲೆಯಲ್ಲಿ ಸರ್ಕಾರ ತನ್ನ ವಶಕ್ಕೆ ಪಡೆಯಲು ಮುಂದಾಗಿತ್ತು. ಇದಲ್ಲದೆ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿ.ಶಂಕರ್ ಅವರು ನೋಟಿಸ್ ಕೂಡ ಜಾರಿಗೊಳಿಸಿದ್ದರು.

ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರು ನೋಟಿಸ್ ಜಾರಿಗೊಳಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್'ಗೆ ಮೋರೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ಪರಿಶೀಲಿಸಿದ ಹೈಕೋರ್ಟ್, ತಮ್ಮ ಬಳಿಯಿರುವ ದಾಖಲೆಗಳನ್ನು ಸರ್ಕಾರ ಪರಿಶೀಲಿಸಿಲ್ಲ. ಈ ಬಗ್ಗೆ ತಹಸೀಲ್ದಾರ್ ಖುದ್ದು ಪರಿಶೀಲಿಸಬೇಕು. ತಹಸೀಲ್ದಾರ್ ವರದಿ ಸಲ್ಲಿಸುವವರೆಗೂ ತೆರವಿಗೆ ತಡೆಯಾಜ್ಞೆ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಟ್ಕಳ ತಹಸೀಲ್ದಾರ್ ಕಚೇರಿಗೆ ಬಾಂಬ್ ಬೆದರಿಕೆ: ಇಮೇಲ್‌ನಲ್ಲಿ ಡಿಎಂಕೆ ವಿರುದ್ಧ ಅಸಂಬದ್ಧ ಆರೋಪ
ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಬಸ್ 3 ಕಾರುಗಳ ಮಧ್ಯೆ ಸರಣಿ ಅಪಘಾತ : ನಾಲ್ವರು ಬೆಂಕಿಗಾಹುತಿ