
ಬೆಂಗಳೂರು, (ಸೆ.16): ಕಳ್ಳತನ ಮಾಡಲೆಂದು ವಿಮಾನದ ಮೂಲಕ ದೆಹಲಿಯಿಂದ ಸಿಲಿಕಾನ್ ಸಿಟಿ ಬೆಂಗಳೂರಿಗೆ ಬುರುತ್ತಿದ್ದ ಹೈಫೈ ಕಳ್ಳ ಈಗ ಪೊಲೀಸರ ಅತಿಥಿಯಾಗಿದ್ದಾನೆ.
ದೆಹಲಿಯ ಚೋರ್ ಬಜಾರ್ ನಿಂದ ಬರ್ತಿದ್ದ ಖತರ್ನಾಕ್ ಕಳ್ಳನ ಹೆಡೆಮುರಿ ಕಟ್ಟುವಲ್ಲಿ ಜೀವನ್ ಭೀಮನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಹರ್ಮಾನ್ ಖಾನ್ ಅಲಿಯಾಸ್ ಸೋನು ಬಂಧಿತ ಖತರ್ನಾಕ್ ಕಳ್ಳ.
ದೆಹಲಿಯಿಂದ ಬೆಂಗಳೂರಿಗೆ ಬಂದು ಕಾಲೇಜು ವಿದ್ಯಾರ್ಥಿಯಂತೆ ಪೋಜ್ ಕೊಡುತ್ತಿದ್ದ ಈ ಐನಾತಿ ಅಸಾಮಿ, ಸಿನಿಮಾ ಶೈಲಿಯಲ್ಲಿ ಕಳ್ಳತನಕ್ಕಿಳಿಯುತ್ತಿದ್ದ. ಇಲ್ಲಿ ಕದ್ದ ಚಿನ್ನವನ್ನೆಲ್ಲಾ ದೆಹಲಿಯ ಚೋರ್ ಬಜಾರ್ ನಲ್ಲಿ ಮಾರಾಟ ಮಾಡುತ್ತಿದ್ದ.
ಈ ಬಗ್ಗೆ ಜೀವನ್ ಭೀಮನಗರ ಪೊಲೀಸರ ಗಮನಕ್ಕೆ ಬಂದಿದ್ದು, ಕಾರ್ಯಚರಣೆ ನಡೆಸಿದ್ದಾರೆ. ಆ ವೇಳೆ ಹೈಫೈ ಕಳ್ಳ ಹರ್ಮಾನ್ ಖಾನ್ ಅಲಿಯಾಸ್ ಸೋನು ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಹರ್ಮಾನ್ ಖಾನ್ ನಿಂದ ಕೆಜಿಗಟ್ಟಲೇ ಚಿನ್ನವನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ