
ಬೆಂಗಳೂರು(ಆ.14): ರಾಜ್ಯ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಇದೇ ಮೊದಲ ಬಾರಿಗೆ ಹೊರರಾಜ್ಯಗಳಿಗೆ 'ಉಚಿತ ಶೈಕ್ಷಣಿಕ ಪ್ರವಾಸ' ಕೈಗೊಳ್ಳುವ ಅವಕಾಶ ದೊರೆಯಲಿದೆ.
ಕೇಂದ್ರ ಸರ್ಕಾರ ಇಂಥದ್ದೊಂದು ಅವಕಾಶ ಕಲ್ಪಿಸಿದ್ದು, ಮೊದಲ ಹಂತದಲ್ಲಿ 9 ಅಥವಾ 10ನೇ ತರಗತಿಯ ಯಾವುದಾದರೊಂದು ತರಗತಿಯ ವಿದ್ಯಾರ್ಥಿಗಳಿಗೆ ಈ ಅವಕಾಶ ಜಾರಿಗೊಳಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.
ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯು ರಾಷ್ಟ್ರೀಯ ಮಾಧ್ಯಮಿಕ ಶಕ್ಷಣ ಅಭಿಯಾನ ಯೋಜನೆಯಡಿ 9/10ನೇ ತರಗತಿ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವಂತೆ ಎಲ್ಲಾ ರಾಜ್ಯಗಳ ಸರ್ವ ಶಿಕ್ಷಣ ಅಭಿಯಾನ(ಎಸ್ಎಸ್ಎ) ಅಧಿಕಾರಿಗಳಿಗೆ ಸೂಚಿಸಿದ್ದು, ಈ ಸಂಬಂಧ 2017-18ನೇ ಶೈಕ್ಷಣಿಕ ಸಾಲಿನಿಂದಲೇ ಇದನ್ನು ಜಾರಿಗೆ ತರುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಎಸ್ಎಸ್ಎ ಅಧಿಕಾರಿಗಳು ಹೇಳಿದ್ದಾರೆ. ಇದರೊಂದಿಗೆ ಇಷ್ಟುದಿನ ರಾಜ್ಯದ ಒಳಗೆ ಮಾತ್ರ ಶೈಕ್ಷಣಿಕ ಪ್ರವಾಸ ಮಾಡುತ್ತಿದ್ದ ಪ್ರೌಢಶಾಲ ವಿದ್ಯಾರ್ಥಿಗಳಿಗೆ ಇನ್ನುಮುಂದೆ ಹೊರರಾಜ್ಯಗಳಿಗೆ ಶೈಕ್ಷಣಿಕ ಪ್ರವಾಸ ಕೈಗೊಳ್ಳುವ ಭಾಗ್ಯ ದೊರೆಯಲಿದೆ.
ಇದುವರೆಗೆ ರಾಜ್ಯ ಸರ್ಕಾರದ 'ಕರ್ನಾಟಕ ದರ್ಶನ, ಚಿಣ್ಣರ ದರ್ಶನ' ಎಂಬ ಯೋಜನೆಗಳಡಿ ಸರ್ಕಾರಿ ಶಾಲೆಗಳ ಪ.ಜಾತಿ, ಪ. ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮಾತ್ರ ರಾಜ್ಯದ ಒಳಗೆ ಉಚಿತ ಶೈಕ್ಷಣಿಕ ಪ್ರವಾಸಕ್ಕೆ ಕರೆದುಕೊಂಡು ಹೋಗಲಾಗುತ್ತಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.