ಎಸ್.ಸಿ. ಜಯಚಂದ್ರ ಜಾಮೀನು ಅರ್ಜಿ ಸಂಬಂಧ ಇಡಿಗೆ ಹೈಕೋರ್ಟ್ ನೋಟಿಸ್

Published : Jun 21, 2017, 10:13 PM ISTUpdated : Apr 11, 2018, 12:50 PM IST
ಎಸ್.ಸಿ. ಜಯಚಂದ್ರ ಜಾಮೀನು ಅರ್ಜಿ ಸಂಬಂಧ ಇಡಿಗೆ ಹೈಕೋರ್ಟ್ ನೋಟಿಸ್

ಸಾರಾಂಶ

ನೋಟು ಬದಲಾವಣೆ ದಂಧೆ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೆ ಗುರಿಯಾಗಿರುವ ರಾಜ್ಯ ಹೆದ್ದಾರಿ ಪ್ರಾಧಿಕಾರದ ಮಾಜಿ ಯೋಜನಾಧಿಕಾರಿ ಎಸ್.ಸಿ. ಜಯಚಂದ್ರ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ಬುಧವಾರ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು (ಜೂ.21): ನೋಟು ಬದಲಾವಣೆ ದಂಧೆ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೆ ಗುರಿಯಾಗಿರುವ ರಾಜ್ಯ ಹೆದ್ದಾರಿ ಪ್ರಾಧಿಕಾರದ ಮಾಜಿ ಯೋಜನಾಧಿಕಾರಿ ಎಸ್.ಸಿ. ಜಯಚಂದ್ರ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ಬುಧವಾರ ನೋಟಿಸ್ ಜಾರಿ ಮಾಡಿದೆ.
ಪ್ರಕರಣ ಸಂಬಂಧ ತಾನು ಬಂಧನಕ್ಕೆ ಒಳಗಾಗಿ ಆರು ತಿಂಗಳಾಗಿದೆ. ಜಾರಿ ನಿರ್ದೇಶನಾಲಯವು ಈಗಾಗಲೇ ತನಿಖೆ ಪೂರ್ಣಗೊಳಿಸಿದೆ. ಜಾರಿ ನಿರ್ದೇಶನಾಲಯ ತಮ್ಮ ವಿರುದ್ಧ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ದಾಖಲಿಸಿದೆ. ಆದರೆ, ತನ್ನ ವಿರುದ್ಧ ಮಾಡಿರುವ ಆರೋಪಗಳಿಗೆ ಈ ಕಾಯ್ದೆಯ ಅಧಿನಿಯಮಗಳು ಅನ್ವಯಿಸುವುದಿಲ್ಲ. ಹೀಗಾಗಿ, ಜಾಮೀನು ನೀಡಬೇಕು ಎಂದು ಕೋರಿ ಹೈಕೋರ್ಟ್ ಜಯಚಂದ್ರ ಅರ್ಜಿ ಸಲ್ಲಿಸಿದ್ದಾರೆ. ಬುಧವಾರ ಜಯಚಂದ್ರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರತ್ನಕಲಾ ಅವರಿದ್ದ ಏಕಸದಸ್ಯ ಪೀಠ, ಅರ್ಜಿ ಕುರಿತು ಆಕ್ಷೇಪಣೆ ಸಲ್ಲಿಸುವಂತೆ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ಜಾರಿ ವಿಚಾರಣೆಯನ್ನು ಜುಲೈ 5 ಕ್ಕೆ ಮುಂದೂಡಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೇಂದ್ರ ಸಚಿವರನ್ನು ಟಾರ್ಗೆಟ್ ಮಾಡಿದ ಪಾಕಿಸ್ತಾನದ ಐಎಸ್‌ಐ: ಕೇಂದ್ರ ಗೃಹ ಇಲಾಖೆಯಿಂದ ಭದ್ರತೆ ಹೆಚ್ಚಳ
ಆಸ್ಟ್ರೇಲಿಯಾದ ಸಿಡ್ನಿ ಬೋಂಡಿ ಬೀಚ್‌ನಲ್ಲಿ ಯಹೂದಿಗಳ ಮೇಲೆ ಉಗ್ರರ ಗುಂಡಿನ ದಾಳಿ: 12 ಸಾವು