ಬಜೆಟ್ 2017ರ ಮುಖ್ಯಾಂಶಗಳು

Published : Jan 30, 2017, 06:42 PM ISTUpdated : Apr 11, 2018, 12:59 PM IST
ಬಜೆಟ್ 2017ರ ಮುಖ್ಯಾಂಶಗಳು

ಸಾರಾಂಶ

ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡನೆಗೆ ಅರುಣ್ ಜೇಟ್ಲಿ ಮುಂದಾದಾಗ ವಿಪಕ್ಷಗಳು ಗದ್ದಲ ಎಬ್ಬಿಸಿದವು. ಮಾಜಿ ಕೇಂದ್ರ ಸಚಿವ ಇ ಅಹಮದ್ ನಿಧನರಾಗಿರುವ ಹಿನ್ನೆಲೆಯಲ್ಲಿ ಬಜೆಟ್ ಮಂಡನೆಯನ್ನು ಮುಂದೂಡಬೇಕೆಂದು ವಿಪಕ್ಷಗಳು ಆಗ್ರಹಿಸಿದವು. ಆದರೆ ಅದಕ್ಕೆ ಸ್ವೀಕರ್ ಸುಮಿತ್ರಾ ಮಹಾಜನ್ ಅವಕಾಶ ನೀಡಲಿಲ್ಲ. ಇ ಅಹಮದ್ ಅವರಿಗೆ ಸಂತಾಪ ಸೂಚಿಸಿ ಬಜೆಟ್ ಮಂಡನೆಗೆ ಅನುಮತಿ ನೀಡಲಾಯ್ತು.

ನವದೆಹಲಿ (ಫೆ.01): ಐನೂರು, ಸಾವಿರ ಮುಖಬೆಲೆ ನೋಟುಗಳ ನಿಷೇಧದ ಬಳಿಕ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಇಂದು 2017-18ನೇ ಸಾಲಿನ ಬಜೆಟ್ ಮಂಡಿಸಿದರು.

ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡನೆಗೆ ಅರುಣ್ ಜೇಟ್ಲಿ ಮುಂದಾದಾಗ ವಿಪಕ್ಷಗಳು ಗದ್ದಲ ಎಬ್ಬಿಸಿದವು. ಮಾಜಿ ಕೇಂದ್ರ ಸಚಿವ ಇ ಅಹಮದ್ ನಿಧನರಾಗಿರುವ ಹಿನ್ನೆಲೆಯಲ್ಲಿ ಬಜೆಟ್ ಮಂಡನೆಯನ್ನು ಮುಂದೂಡಬೇಕೆಂದು ವಿಪಕ್ಷಗಳು ಆಗ್ರಹಿಸಿದವು. ಆದರೆ ಅದಕ್ಕೆ ಸ್ವೀಕರ್ ಸುಮಿತ್ರಾ ಮಹಾಜನ್ ಅವಕಾಶ ನೀಡಲಿಲ್ಲ. ಇ ಅಹಮದ್ ಅವರಿಗೆ ಸಂತಾಪ ಸೂಚಿಸಿ ಬಜೆಟ್ ಮಂಡನೆಗೆ ಅನುಮತಿ ನೀಡಲಾಯ್ತು.

ದೇಶದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಕೆ ಏಕಕಾಲಕ್ಕೆ ರೈಲ್ವೆ ಬಜೆಟ್ ಒಳಗೊಂಡ ಸಾಮಾನ್ಯ ಬಜೆಟ್ ಇದಾಗಿತ್ತು. ಈ ಬಾರಿಯ ಬಜೆಟ್'ನ ಒಟ್ಟು ಗಾತ್ರವು ರೂ. 21 ಲಕ್ಷದ 47 ಸಾವಿರ ಕೋಟಿಯಾಗಿದೆ. ಜೇಟ್ಲಿ ನಾಲ್ಕನೇ ಬಾರಿಗೆ ಬಜೆಟ್ ಮಂಡನೆ ಮಾಡಿದ್ದಾರೆ. 

 

ಕ್ಯಾಶ್'ಲೆಸ್ ವ್ಯವಹಾರ:

ಕ್ಯಾಶ್'ಲೆಶ್ ವ್ಯವಹಾರಕ್ಕೆ ಆದ್ಯತೆ ನೀಡಿರುವ ಅರುಣ್ ಜೇಟ್ಲಿ, ನಗದು ವ್ಯವಹಾರಕ್ಕೆ ಬ್ರೇಕ್ ಹಾಕಿದ್ದಾರೆ. 3 ಲಕ್ಷಕ್ಕಿಂತ ಅಧಿಕ ನಗದು ವ್ಯವಹಾರಕ್ಕೆ ತಡೆ ನೀಡಲಾಗಿದೆ. 3 ಲಕ್ಷಕ್ಕಿಂತ ಹೆಚ್ಚಿನ ವ್ಯವಹಾರ ಬ್ಯಾಂಕ್ ಮೂಲಕವೇ ಆಗಬೇಕು. ಏಕಕಾಲಕ್ಕೆ 3 ಲಕ್ಷ ನಗದು ವ್ಯವಹಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಸಾಮಾಜಿಕ ಭದ್ರತೆ:

ಬಜೆಟ್'ನಲ್ಲಿ ಸಾಮಾಜಿಕ ಭದ್ರತೆಗೆ ಒತ್ತು ನೀಡಲಾಗಿದೆ. 14 ಲಕ್ಷ ಅಂಗನವಾಡಿ ಕೇಂದ್ರಗಳು ಮಹಿಳಾ ಶಕ್ತಿ ಕೇಂದ್ರದ ವ್ಯಾಪ್ತಿಗೆ ಸೇರ್ಪಡೆಗೊಳಿಸಲಾಗಿದೆ. ಇವುಗಳ ಮೂಲಕ ಗರ್ಭಿಣಿಯರ ಖಾತೆಗೆ 6 ಸಾವಿರ ರೂ. ಮಂಜೂರು ಮಾಡಲಾಗುವುದು. 1.5 ಲಕ್ಷ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣಗೊಳಿಸಲಾಗುವುದು. ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿ ವರ್ಷ 5 ಸಾವಿರ ವೈದ್ಯರ ನೇಮಕ ಮಾಡಲಾಗುವುದು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 1.84 ಲಕ್ಷ ಕೋಟಿ ನೀಡಲಾಗುವುದು.

ಕೈಗಾರಿಕಾ ವಲಯ:

ಸಣ್ಣ, ಮಧ್ಯಮ ಕೈಗಾರಿಕೆಗಳ ಕಾರ್ಪೊರೇಟ್​ ತೆರಿಗೆಯನ್ನು ಶೇ.30ರಿಂದ ಶೇ.25ಕ್ಕೆ ಇಳಿಸಲಾಗಿದೆ.  50 ಕೋಟಿ ವಹಿವಾಟು ಸಂಸ್ಥೆಗಳಿಗೆ ಶೇ.25 ತೆರಿಗೆ, 67 ಲಕ್ಷ ಕಂಪೆನಿಗಳು ಈ ವ್ಯಾಪ್ತಿಗೆ ಬರುತ್ತವೆ. ಎಲ್​ಎನ್​ಜಿ ಕಸ್ಟಮ್ಸ್ ಶುಲ್ಕ ಶೇ.5ರಿಂದ ಶೇ.2.5ಕ್ಕೆ ಇಳಿಕೆ ಮಡಲಾಗಿದೆ.

ಸುಸ್ತಿದಾರರಿಗೆ ಸಂಕಷ್ಟ:

ಸಾಲ ಪಡೆದು ಪರಾರಿಯಾಗುವವರಿಗೆೀ ಬಜೆಟ್'ನಲ್ಲಿ ಕಠಿಣ ಸಂದೇಶವನ್ನು ನೀಡಲಾಗಿದೆ.  ಅಂಥವರ ಆಸ್ತಿ ಸಂಪೂರ್ಣವಾಗಿ  ಜಪ್ತಿ ಮಾಡಲಾಗುವುದು. ಆರ್ಥಿಕ ಅಪರಾಧಗಳ ದಂಡನೆಗೆ ಹೊಸ ಕಾನೂನು ರೂಪಿಸುವುದಾಗಿ ಹೇಳಲಾಗಿದೆ.

ಅಕ್ರಮ ಬಂಡವಾಳಕ್ಕೆ ಬ್ರೇಕ್:
ಅಕ್ರಮ ಬಂಡವಾಳ ನಿಗ್ರಹಕ್ಕೆ ಹೊಸ ವಿಧೇಯಕ ಜಾರಿ ಮಾಡುವುದಾಗಿ ಘೋಷಿಸಲಾಗಿದೆ.  ಅಕ್ರಮ ಚಿಟ್'​ಫಂಡ್​ಗಳ ಕಡಿವಾಣಕ್ಕೆ ಹೊಸ ಕಾನೂನು ತರಲಾಗುವುದು ಹಾಗೂ ಚೆಕ್ ಮೂಲಕವೇ ರಾಷ್ಟ್ರೀಯ ಬಾಂಡ್​ ಖರೀದಿ ಮಾಡಬೇಕು. ಧಾರ್ಮಿಕ ಕ್ಷೇತ್ರಗಳಿಗೆ ದೇಣಿಗೆ ಕೊಟ್ಟರೆ ತೆರಿಗೆ ಇಲ್ಲ.

ಉದ್ಯೋಗ ಸೃಷ್ಟಿ:
600 ಜಿಲ್ಲೆಗಳಲ್ಲಿ ಪ್ರಧಾನ ಮಂತ್ರಿ ಕೌಶಲ ಕೇಂದ್ರ ಸ್ಥಾಪನೆ ಮಾಡಲಾಗುವುದು. ಚರ್ಮೋದ್ಯಮಕ್ಕೆ ವಿಶೇಷ ಅನುದಾನ ಮೀಸಲಿಡಲಾಗಿದೆ. ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ಹಾಗೂ ಮುದ್ರಾ ಬ್ಯಾಂಕ್ ಮೂಲಕ ಸಾಲಕ್ಕೆ 2.44 ಲಕ್ಷ ಕೋಟಿ ಅನುದಾನ ಮೀಸಲಿಡಲಾಗಿದೆ.

ಇನ್ನಷ್ಟು ಸುದ್ದಿಗಳಿಗೆ ಈ ಕೆಳಗಿನ ಕೊಂಡಿಗಳನ್ನು ಕ್ಲಿಕ್ಕಿಸಿ:

ಬಜೆಟ್ 2017: ರೈಲು ಸ್ವಚ್ಛತೆ ಹಾಗೂ ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ

ಆರೋಗ್ಯ ಕ್ಷೇತ್ರಕ್ಕೆ ಬಜೆಟ್'ನಲ್ಲೇನಿದೆ?

ರಕ್ಷಣಾ ವಲಯ ಅನುದಾನದಲ್ಲಿ ಸುಮಾರು ಶೇ.10 ಏರಿಕೆ

ಆದಾಯ ಪಾವತಿದಾರರಿಗೆ ರಿಲೀಫ್; ತೆರಿಗೆ ಮಿತಿ ಏರಿಕೆಯಿಲ್ಲ

ರಾಜಕೀಯ ಪಕ್ಷಗಳಿಗೆ ಶಾಕ್ ಕೊಟ್ಟ ಬಜೆಟ್

ಬಜೆಟ್ 2017: ವ್ಯಾಪಾರಿಗಳಿಗೆ ಸಿಹಿ ಸುದ್ದಿ

ಡಿಜಿಟಲ್ ಪಾವತಿಗೆ ಒತ್ತು ಕೊಟ್ಟ ಬಜೆಟ್

ರಾಜ್ಯದ ರೈಲ್ವೇಗೆ ಬಜೆಟ್'ನಲ್ಲಿ ಸಿಕ್ಕಿದ್ದೇನು?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಲ್ಲಿ ಪಬ್‌ಗೆ ಬಂದಿದ್ದ ಹುಡುಗಿ ಫೋನ್ ನಂಬರ್ ಕೇಳಿದ ಉಮೇಶ; ಕೊಡದಿದ್ದಕ್ಕೆ ಹಲ್ಲೆ!
ಗಡಿಪಾರಾಗಿ ಬಂದಿದ್ದ ರೌಡಿಶೀಟರ್ ಬರ್ಬರ ಹತ್ಯೆ, ಐವರು ಅರೆಸ್ಟ್, ಕೊಲೆಗೆ ಸ್ಕೆಚ್ ಹೇಗೆ ನಡೆದಿತ್ತು?