ತಮಿಳುನಾಡಲ್ಲಿ ಕೇಂದ್ರ ಸರ್ಕಾರದ ಕಚೇರಿಗಳ ಹಿಂದಿ ಫಲಕಗಳಿಗೆ ಮಸಿ

Published : Jun 09, 2019, 09:45 AM IST
ತಮಿಳುನಾಡಲ್ಲಿ ಕೇಂದ್ರ ಸರ್ಕಾರದ ಕಚೇರಿಗಳ ಹಿಂದಿ ಫಲಕಗಳಿಗೆ ಮಸಿ

ಸಾರಾಂಶ

ನೂತನ ಶಿಕ್ಷಣ ನೀತಿಯಲ್ಲಿ ತ್ರಿಭಾಷಾ ಸೂತ್ರ ಜಾರಿ ಕುರಿತ ಶಿಫಾರಸಿಗೆ ಭಾರೀ ವಿರೋಧ| ತಮಿಳುನಾಡಲ್ಲಿ ಕೇಂದ್ರ ಸರ್ಕಾರದ ಕಚೇರಿಗಳ ಹಿಂದಿ ಫಲಕಗಳಿಗೆ ಮಸಿ| 

ತಿರುಚಿರಾಪಲ್ಲಿ[ಜೂ.09: ನೂತನ ಶಿಕ್ಷಣ ನೀತಿಯಲ್ಲಿ ತ್ರಿಭಾಷಾ ಸೂತ್ರ ಜಾರಿ ಕುರಿತ ಶಿಫಾರಸಿಗೆ ಭಾರೀ ವಿರೋಧ ವ್ಯಕ್ತಪಡಿಸಿದ್ದ ತಮಿಳುನಾಡಿನಲ್ಲಿ ಇದೀಗ, ಕೇಂದ್ರ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಹಿಂದಿ ಫಲಕಗಳಿಗೆ ಮಸಿ ಬಳಿದ ಘಟನೆ ನಡೆದಿದೆ.

ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವ ಬಿಎಸ್‌ಎನ್‌ಎಲ್‌ ಮತ್ತು ವಿಮಾನ ನಿಲ್ದಾಣಗಳಲ್ಲಿ ಅಳವಡಿಸಲಾಗಿದ್ದ ಹಿಂದಿ ಫಲಕಗಳಿಗೆ ಅನಾಮಿಕರು ಮಸಿ ಬಳಿದಿದ್ದಾರೆ. ಆದರೆ ಫಲಕಗಳಿಗೆ ಯಾವುದೇ ಹಾನಿ ಮಾಡಿಲ್ಲ. ಈ ಘಟನೆ ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ವಿಶೇಷವೆಂದರೆ ಮಸಿ ಬಳಿದವರು, ಅಂಗ್ಲ ಫಲಕದ ತಂಟೆಗೆ ಹೋಗಿಲ್ಲ.

ಇತ್ತೀಚೆಗಷ್ಟೇ ಇಸ್ರೋದ ಮಾಜಿ ಮುಖ್ಯಸ್ಥ ಕಸ್ತೂರಿ ರಂಗನ್‌ ನೇತೃತ್ವದ ಸಮಿತಿ ಹೊಸ ಶಿಕ್ಷಣ ನೀತಿ ಜಾರಿ ಸಂಬಂಧ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯಲ್ಲಿ ತ್ರಿಭಾಷಾ ಸೂತ್ರ ಜಾರಿಗೆ ಶಿಫಾರಸು ಮಾಡಿತ್ತು. ಆದರೆ ಇದಕ್ಕೆ ತಮಿಳುನಾಡು, ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು ಹೊಸವರ್ಷ ಸಂಭ್ರಮದಲ್ಲಿ ನಶೆ ಏರಿದ ಮಹಿಳೆಯರಿಗೆ ರಾತ್ರಿ ಇಡಿ ಉಚಿತ ಡ್ರಾಪ್
ಮಂಗಳೂರು ಕಂಬಳದಲ್ಲಿ ಹಿರಿಯ ತೀರ್ಪುಗಾರಗೆ ಅವಮಾನ, ಜಾಲತಾಣದಲ್ಲಿ ವ್ಯಾಪಕ ಅಕ್ರೋಶ