ಡ್ರೈವರ್‌ಗಾಗಿ ರೋಜಾ ಮಾಡುವ ಹಿಂದೂ ಫಾರೆಸ್ಟ್ ಆಫೀಸರ್!

Published : May 31, 2019, 08:27 PM IST
ಡ್ರೈವರ್‌ಗಾಗಿ ರೋಜಾ ಮಾಡುವ ಹಿಂದೂ ಫಾರೆಸ್ಟ್ ಆಫೀಸರ್!

ಸಾರಾಂಶ

ದೇಶದ ಕೋಮು ಸೌಹಾರ್ದತೆಗೆ ಧಕ್ಕೆ ತರಲು ಸಾಧ್ಯವಿಲ್ಲ| ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಈ ದೇಶದಲ್ಲಿ ತನ್ನದೇ ಆದ ಇತಿಹಾಸವಿದೆ| ಚಾಲಕನಿಗಾಗಿ ರಂಜಾನ್ ಉಪವಾಸ ಕೈಗೊಳ್ಳುವ ಅರಣ್ಯಾಧಿಕಾರಿ| ಮಹಾರಾಷ್ಟ್ರದ ಬುಲ್ದಾನಾ ಅರಣ್ಯ ಅಧಿಕಾರಿ ಸಂಜಯ್ ಮಾಳಿ| ನಾರೋಗ್ಯಪೀಡಿತ ಚಾಲಕ ಜಫರ್ ಗಾಗಿ ನಿತ್ಯವೂ ರಂಜಾನ್ ಉಪವಾಸ| 

ಬುಲ್ದಾನಾ:(ಮೇ.31): ದೇಶದ ಕೋಮುಸೌಹಾರ್ದತೆ ತಳಮಟ್ಟದಲ್ಲಿ ಅದೆಷ್ಟು ಆಳವಾಗಿ ಬೇರೂರಿದೆ ಎಂದರೆ, ಯಾರಿಂದಲೂ ಈ ಸೌಹಾರ್ದತೆಗೆ ಧಕ್ಕೆ ತರಲು ಸಾಧ್ಯವಿಲ್ಲ. ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಈ ದೇಶದಲ್ಲಿ ತನ್ನದೇ ಆದ ಇತಿಹಾಸವಿದೆ.

ಅದರಂತೆ ಮಹಾರಾಷ್ಟ್ರದ ಬುಲ್ದಾನಾ ಅರಣ್ಯ ಅಧಿಕಾರಿಯೊಬ್ಬರು ತಮ್ಮ ಅನಾರೋಗ್ಯಪೀಡಿತ ಚಾಲಕನಿಗಾಗಿ ನಿತ್ಯವೂ ರಂಜಾನ್ ಉಪವಾಸ ಕೈಗೊಂಡು ಭಾವೈಕ್ಯತೆಯ ಮತ್ತೊಂದು ಸಂದೇಶವನ್ನು ಜಗತ್ತಿಗೆ ಸಾರಿದ್ದಾರೆ.

ಬುಲ್ದಾನಾ ಅರಣ್ಯ ಅಧಿಕಾರಿ ಸಂಜಯ್ ಮಾಳಿ, ತಮ್ಮ ಚಾಲಕ ಜಫರ್ ಗಾಗಿ ನಿತ್ಯವೂ ರಂಜಾನ್ ಉಪವಾಸ ಮಾಡುತ್ತಿದ್ದಾರೆ. ಜಫರ್ ನಾರೋಗ್ಯಪೀಡಿತರಾಗಿದ್ದು, ಅನಾರೋಗ್ಯದ ಮಧ್ಯೆಯೂ ಜಫರ್ ಮಾಳಿ ಅವರ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಈ ಕಾರಣಕ್ಕೆ ಜಫರ್ ಬದಲಾಗಿ ಸಂಜಯ್ ಮಾಳಿ ನಿತ್ಯವೂ ರಂಜಾನ್ ಉಪವಾಸ ಕೈಗೊಂಡಿದ್ದಾರೆ. ರಂಜಾನ್ ವೇಳೆಯೂ ಜಫರ್ ಕರ್ತವ್ಯ ನಿರ್ವಹಿಸಬಹುದಾದರೆ ನಾನೇಕೆ ಆತನಿಗಾಗಿ ಉಪವಾಸ ವೃತ ಕೈಗೊಳ್ಳಬಾರದು ಎಂದು ಕೇಳುತ್ತಾರೆ ಸಂಜಯ್ ಮಾಳಿ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು