
ಮಂಗಳೂರು(ಸೆ.18): ಹಿಂದೂ ಜಾಗರಣ ವೇದಿಕೆ ಮುಖಂಡ ಜಗದೀಶ್ ಕಾರಂತ್ ಇದೀಗ ವಿವಾದದಲ್ಲಿ ಸಿಲುಕಿದ್ದಾರೆ. ಇನ್ಸ್'ಪೆಕ್ಟರ್'ವೊಬ್ಬರ ವಿರುದ್ಧ ಪ್ರಚೋದನಾತ್ಮಕ ಹೇಳಿಕೆ ನೀಡುವ ಮೂಲಕ ವಿವಾದದ ಕೇಂದ್ರಬಿಂದುವಾಗಿದ್ದಾರೆ.
ಪುತ್ತೂರು ಗ್ರಾಮಾಂತರ ಠಾಣೆ ಇನ್ಸ್'ಪೆಕ್ಟರ್ ಖಾದರ್ ವಿರುದ್ಧ ವಾಗ್ದಾಳಿ ನಡೆಸಿರುವ ಜಗದೀಶ್ ಕಾರಂತ್, ಇನ್ಸ್'ಪೆಕ್ಟರ್ ಖಾದರ್ ತಲೆ ಬೋಳಿಸಿ ಕತ್ತೆಯ ಮೇಲೆ ಮೆರವಣಿಗೆ ಮಾಡಲು ಸಿದ್ಧ . ಖಾದರ್'ರನ್ನು ಬಟ್ಟೆ ಬಿಚ್ಚಿ ಬೆತ್ತಲೆ ಮಾಡಿ ಬಸ್ ಸ್ಟಾಂಡ್'ನಲ್ಲಿ ಯಾಕೆ ಓಡಿಸಬಾರದು. ರಸ್ತೆಯಲ್ಲಿ ಕಲ್ಲು ಹೊಡೆದು ಹುಚ್ಚು ನಾಯಿಯಂತೆ ಯಾಕೆ ಅಟ್ಟಾಡಿಸಬಾರದು ಎಂಬ ಮಾತುಗಳನ್ನಾಡಿದ್ದಾರೆ.
ಖಾದರ್ ಕುರಿತು, 'ನೀನು ಪಿಎಫ್'ಐನ ಏಜೆಂಟ್'ನಂತೆ ವರ್ತಿಸುವುದಾದರೆ, ಗೋರಕ್ಷಕರನ್ನು ಶಿಕ್ಷಿಸುವ ಮುಸ್ಲೀಮನೇ ಆದರೆ, ನಾನು ಹಿಂದೂವಾಗಿ ನಿನಗೆ ರಸ್ತೆಯಲ್ಲಿ ಕಲ್ಲು ಹೊಡೆದು ನಿನ್ನನ್ನು ಹುಚ್ಚುನಾಯಿಯಂತೆ ಯಾಕೆ ಅಟ್ಟಾಡಿಸಬಾರದು' ಎಂದು ಕಿಡಿಕಾರಿದ್ದಾರೆ.
ಪುತ್ತೂರಿನಲ್ಲಿ ಕಳೆದ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ಪೇಚಿಗೆ ಸಿಲುಕಿದ್ದಾರೆ. ಜಗದೀಶ್ ಕಾರಂತ್ ನಾಲಿಗೆ ಹರಿಬಿಟ್ಟು ಮಾತಾಡಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.