
ನವದೆಹಲಿ (ಸೆ.29): ಬುರ್ಖಾ ಹಾಕಿಕೊಂಡು ಬಂದ ಹಿಂದೂ ಮಹಿಳೆಯನ್ನು ಇಂದಿರಾ ಗಾಂಧಿ ಏರ್’ಪೋರ್ಟ್’ನ ಅಧಿಕಾರಿಗಳು ತಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮಹಿಳೆಯ ಫ್ಲೈಟ್ ಟಿಕೆಟ್’ನಲ್ಲಿ ಹಿಂದೂ ಹೆಸರಿದ್ದು ಆಕೆ ಬುರ್ಖಾ ಹಾಕಿರುವುದು ನೋಡಿ ಅಲ್ಲಿನ ಅಧಿಕಾರಿಗಳಿಗೆ ಸಂಶಯ ಬಂದು ತಡೆದಿದ್ದಾರೆ. ವಿಚಾರಣೆಗೆ ಒಳಪಡಿಸಿದಾಗ “ಮಧ್ಯಪ್ರದೇಶ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನ ಜೊತೆ ದೆಹಲಿಯಿಂದ ಮುಂಬೈಗೆ ತೆರಳುತ್ತಿದ್ದೇನೆ. ಅವರು ನನ್ನ ಭಾವೀ ಪತಿ. ಅವರನ್ನು ಭೇಟಿ ಮಾಡಲು ದೆಹಲಿಗೆ ಬಂದಿದ್ದೆ. ನನ್ನ ತಾಯಿಯ ಕೈಯಲ್ಲಿ ಸಿಕ್ಕಿ ಹಾಕಿಕೊಳ್ಳಬಾರದು ಎನ್ನುವ ಉದ್ದೇಶದಿಂದ ಬುರ್ಖಾ ಹಾಕಿದ್ದೆ ಎಂದು ಮಹಿಳೆ ಹೇಳಿರೋದಾಗಿ ಅಧಿಕಾರಿಗಳು ಹೇಳಿದ್ದಾರೆ.
ಅವರ ವರ್ತನೆ ಅನುಮಾನಾಸ್ಪದವಾಗಿಲ್ಲದೇ ಇರುವುದರಿಂದ ಕೊನೆಗೆ ಅವರನ್ನು ಬಿಡಲಾಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.