ವೈರಲ್ ಚೆಕ್: ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ರಚನೆ ಬಳಿಕ ಮುಸ್ಲಿಮರಿಂದ ಹಿಂದುಗಳಿಗೆ ಥಳಿತ?

Published : Jun 15, 2018, 04:29 PM ISTUpdated : Jun 15, 2018, 05:37 PM IST
ವೈರಲ್ ಚೆಕ್: ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ರಚನೆ ಬಳಿಕ ಮುಸ್ಲಿಮರಿಂದ ಹಿಂದುಗಳಿಗೆ ಥಳಿತ?

ಸಾರಾಂಶ

ಯಾರೆಲ್ಲಾ 2019ರಲ್ಲಿ ಕಾಂಗ್ರೆಸ್ ಮತ್ತೆ  ಅಧಿಕಾರಕ್ಕೆ ಬರಬೇಕೆಂದುಕೊಳ್ಳುತ್ತಿದ್ದೀರೋ ಅವರೆಲ್ಲಾ ಈ ವಿಡಿಯೋವನ್ನು ತಪ್ಪದೇ ನೋಡಿ. ಸರ್ಕಾರ ರಚನೆಯಾಗಿ ಇನ್ನೂ ಒಂದು ತಿಂಗಳು ಕೂಡ ಕಳೆದಿಲ್ಲ. ಮಸ್ಲಿಮರು ಹಿಂದುಗಳನ್ನು ಥಳಿಸುತ್ತಿದ್ದಾರೆ ಎಂಬಂತಹ ಸಂದೇಶದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ಸತ್ಯವೇ?   

ಯಾರೆಲ್ಲಾ 2019ರಲ್ಲಿ ಕಾಂಗ್ರೆಸ್ ಮತ್ತೆ  ಅಧಿಕಾರಕ್ಕೆ ಬರಬೇಕೆಂದುಕೊಳ್ಳುತ್ತಿದ್ದೀರೋ ಅವರೆಲ್ಲಾ ಈ ವಿಡಿಯೋವನ್ನು ತಪ್ಪದೇ ನೋಡಿ. ಸರ್ಕಾರ ರಚನೆಯಾಗಿ ಇನ್ನೂ ಒಂದು ತಿಂಗಳು ಕೂಡ ಕಳೆದಿಲ್ಲ. ಮಸ್ಲಿಮರು ಹಿಂದುಗಳನ್ನು ಥಳಿಸುತ್ತಿದ್ದಾರೆ ಎಂಬಂತಹ ಸಂದೇಶದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ, ಇದರ ಸತ್ಯಾಸತ್ಯತೆ ಇಲ್ಲಿದೆ...

ವಿಡಿಯೋದಲ್ಲಿ ಬೈಕ್ ಸವಾರನೊಬ್ಬನನ್ನು ಗುಂಪೊಂದು ಥಳಿಸುತ್ತಿ ರುವ ಅಸ್ಪಷ್ಟ ದೃಶ್ಯವಿದೆ. ಇದನ್ನು ಸೊಷಿಯಲ್ ಮೀಡಿಯಾ ದಲ್ಲಿ ಹಾಕಿ ಕರ್ನಾಟಕದಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾದಾಗಿನಿಂದ ಈ ರೀತಿ ಘಟನೆಗಳು ನಡೆಯುತ್ತಿವೆ ಎಂದು ಆರೋಪಿಸಿ ಅಡಿಬರಹ ವನ್ನು ಬರೆಯಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ ನಿಜಕ್ಕೂ ಕರ್ನಾಟಕದಲ್ಲಿ ಕಾಂಗ್ರೆಸ್-ಜೈಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಈ ರೀತಿಯ ಹಿಂಸಾಚಾರದ ಘಟನೆ ನಡೆದಿತ್ತೇ, ಮುಸ್ಲಿಮರು ಹಿಂದುಗಳನ್ನು ಥಳಿಸಿದ್ದರೇ  ಎಂದು ಆಲ್ಟ್ ನ್ಯೂಸ್ ತನಿಖೆಗೆ ಮುಂದಾದಾಗ ಈ ವಿಡಿಯೋ ಹಿಂದಿನ ಅಸಲಿ ಕತೆ ಬಯಲಾಗಿದೆ. 

 ಸಾಮಾಜಿಕ ಮಾಧ್ಯಮಗಳಲ್ಲಿ ಕರ್ನಾಟಕದಲ್ಲಿ ನಡೆದ ಘಟನೆ ಎಂದು ಬಿಂಬಿತವಾಗಿರುವ ವಿಡಿಯೋ ವಾಸ್ತವದಲ್ಲಿ ಕರ್ನಾಟಕದ್ದೇ ಅಲ್ಲ. ಆಲ್ಟ್ ನ್ಯೂಸ್ ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಹೊರಟಾಗ ಇದು ಜಾರ್ಖಂಡ್‌ನ ರಾಂಚಿಯ ವಿಡಿಯೋ ಎಂಬುದು ಪತ್ತೆಯಾಗಿದೆ. ಎನ್‌ಡಿಎ ಸರ್ಕಾರ 4 ವರ್ಷ ಪೂರೈಸಿದ ಹಿನ್ನಲೆ ಕೈಗೊಂಡಿದ್ದ ಬೈಕ್  ರ್ಯಾಲಿ ಸಂದರ್ಭದಲ್ಲಿ ಭಾರತೀಯ ಜನತಾ ಯುವ ಮೋರ್ಚಾದ ಸದಸ್ಯನೊಬ್ಬ ಪ್ರಚೋದನಾಕಾರಿ ಘೋಷಣೆ ಕೂಗಿದ್ದ. 

ಈ ವೇಳೆ ಸಾರ್ವಜನಿಕರು ಮತ್ತು ಯುವ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿ ವಾಗ್ವಾದ ಮತ್ತು ಕಲ್ಲು ತೂರಾಟ ನಡೆದಿತ್ತು. ಕೊನೆಗೆ ಪೊಲೀಸರ ಮಧ್ಯಸ್ಥಿಕೆಯಲ್ಲಿ ವಾಗ್ವಾದ ತೆರ ಕಂಡಿತ್ತು. ಈ ಘಟನೆಯನ್ನು ಕರ್ನಾಟಕದಲ್ಲಿ ನಡೆದ ಕೋಮು ಸಂಘರ್ಷ ಎಂದು ಬಿಂಬಿಸಿ ಸೋಷಿಯಲ್ ಮೀಡಿಯಾದಲ್ಲಿ ಹರಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹಾಸನದ ತಿರುಪತಿಹಳ್ಳಿ ಬೆಟ್ಟದ ಮೇಲೆ 50ಕ್ಕೂ ಅಧಿಕ ಉಲ್ಕೆಗಳ ಸುರಿಮಳೆ!
India Latest News Live: ಪಹಲ್ಗಾಂ ಉಗ್ರ ದಾಳಿ: ಕೋರ್ಟ್‌ಗೆ 1597 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ