ಮೋದಿ ನಂಬಿಕೆ ಹುಸಿ ಮಾಡಲಿಲ್ಲ ಶಾ ಅಮಿತ್‌ ಶಾ

Published : Aug 06, 2019, 09:25 AM IST
ಮೋದಿ ನಂಬಿಕೆ ಹುಸಿ ಮಾಡಲಿಲ್ಲ ಶಾ ಅಮಿತ್‌ ಶಾ

ಸಾರಾಂಶ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಕೇಂದ್ರ ಸರ್ಕಾರದ ನಂ.2 ಸ್ಥಾನವಾದ ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ದೇಶದಲ್ಲಿ ಮಹತ್ವದ ನಿರ್ಧಾರಗಳು ಪ್ರಕಟವಾಗಬಹುದು ಎಂಬ ನಿರೀಕ್ಷೆ ಗರಿಗೆದರಿದ್ದವು. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ 370ನೇ ವಿಧಿಯನ್ನು ಕೇಂದ್ರ ಸರ್ಕಾರ ಸೋಮವಾರ ನಿಷ್ಕ್ರಿಯವಾಗುವುದರೊಂದಿಗೆ ಅದು ನಿಜವಾಗಿದೆ. 

ನವದೆಹಲಿ (ಆ. 06): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಕೇಂದ್ರ ಸರ್ಕಾರದ ನಂ.2 ಸ್ಥಾನವಾದ ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ದೇಶದಲ್ಲಿ ಮಹತ್ವದ ನಿರ್ಧಾರಗಳು ಪ್ರಕಟವಾಗಬಹುದು ಎಂಬ ನಿರೀಕ್ಷೆ ಗರಿಗೆದರಿದ್ದವು.

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ 370ನೇ ವಿಧಿಯನ್ನು ಕೇಂದ್ರ ಸರ್ಕಾರ ಸೋಮವಾರ ನಿಷ್ಕಿ್ರಯವಾಗುವುದರೊಂದಿಗೆ ಅದು ನಿಜವಾಗಿದೆ. ಇದು ಅಮಿತ್‌ ಶಾ ಅವರು ತಮ್ಮ ರಾಜಕೀಯ ಜೀವನದಲ್ಲಿ ಕೈಗೊಂಡ ಬಹುದೊಡ್ಡ ನಿರ್ಧಾರವಾಗಿದ್ದು, ಅವರ ಹೆಸರು ಚಿರಸ್ಥಾಯಿಯಾಗಲಿದೆ.

ಮೋದಿ ಅವರು ಗುಜರಾತ್‌ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅಮಿತ್‌ ಶಾ ಆ ರಾಜ್ಯದ ಗೃಹ ಸಚಿವರಾಗಿದ್ದರು. ಅವರ ಆಡಳಿತ ವೈಖರಿ ಗೊತ್ತಿದ್ದ ಕಾರಣದಿಂದಲೇ ಈ ಬಾರಿ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ನಿರ್ಧಾರವನ್ನು ಮೋದಿ ಕೈಗೊಂಡಿದ್ದರು. ಅದಕ್ಕಾಗಿ ಅಮಿತ್‌ ಶಾ ಅವರನ್ನು ಮೊದಲ ಬಾರಿಗೆ ಲೋಕಸಭೆ ಚುನಾವಣೆಗೆ ನಿಲ್ಲಿಸಲಾಗಿತ್ತು. ಗೆದ್ದು ಬರುತ್ತಿದ್ದಂತೆ ಅವರಿಗೆ ಗೃಹ ಖಾತೆಯನ್ನು ನೀಡಲಾಗಿತ್ತು.

ಜಮ್ಮು-ಕಾಶ್ಮೀರದಂತಹ ವಿಚಾರಗಳಲ್ಲಿ ರಹಸ್ಯ ಕಾಪಾಡಿಕೊಂಡು, ನಿರ್ಧಾರಗಳನ್ನು ಜಾರಿಗೊಳಿಸಲು ನಂಬಿಕಸ್ಥ ಬಂಟರೊಬ್ಬರು ಮೋದಿ ಅವರಿಗೆ ಬೇಕಾಗಿದ್ದರು. ಆ ಸ್ಥಾನಕ್ಕೆ ಮೋದಿ ಅವರು ಅಮಿತ್‌ ಶಾ ಅವರನ್ನು ಆಯ್ಕೆ ಮಾಡಿಕೊಂಡರು. ಅವರ ಆಯ್ಕೆ ಸರಿಯಾಗಿಯೇ ಇದೆ ಎಂಬುದನ್ನು ಅಮಿತ್‌ ಶಾ ಮತ್ತೊಮ್ಮೆ ನಿರೂಪಿಸಿದ್ದಾರೆ.

ಶಂಕಿತ ಉಗ್ರರನ್ನು ಉಗ್ರಗಾಮಿಗಳೆಂದು ಘೋಷಿಸುವ ಕಾನೂನುಬಾಹಿರ ಚಟುವಟಿಕೆ ತಡೆ ಮಸೂದೆಯನ್ನು ಕಳೆದ ವಾರವಷ್ಟೇ ಯಶಸ್ವಿಯಾಗಿ ಅಂಗೀಕರಿಸಿದ್ದ ಅಮಿತ್‌ ಶಾ, ತನ್ಮೂಲಕ ಉಗ್ರರ ಹೆಡೆಮುರಿ ಕಟ್ಟಲು ಕಾನೂನಿನ ಬಲ ಒದಗಿಸಿದ್ದರು. ಈಗ ಜಮ್ಮು-ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ನೋಡಿಕೊಳ್ಳಬೇಕಾದ ಹೊಣೆಯನ್ನೂ ಹೊತ್ತಿದ್ದಾರೆ. ಕಾಶ್ಮೀರದ ಕಾನೂನು- ಸುವ್ಯವಸ್ಥೆ ಇನ್ನು ಕೇಂದ್ರ ಸರ್ಕಾರ ಅದರಲ್ಲೂ ಗೃಹ ಇಲಾಖೆಯ ಪರಿಧಿಗೆ ಬರುವುದರಿಂದ ಅವರ ಜವಾಬ್ದಾರಿ ಇನ್ನಷ್ಟುಹೆಚ್ಚಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?