ಇತಿಹಾಸ ಬಿಜೆಪಿಯನ್ನು ಎಂದಿಗೂ ಕ್ಷಮಿಸಲ್ಲ: ಶಿವಸೇನೆ..!

Published : Jun 21, 2018, 04:48 PM IST
ಇತಿಹಾಸ ಬಿಜೆಪಿಯನ್ನು ಎಂದಿಗೂ ಕ್ಷಮಿಸಲ್ಲ: ಶಿವಸೇನೆ..!

ಸಾರಾಂಶ

ಇತಿಹಾಸ ಬಿಜೆಪಿಯನ್ನು ಎಂದಿಗೂ ಕ್ಷಮಿಸಲ್ಲ ಎಂದ ಶಿವಸೇನೆ ಬಿಜೆಪಿ ವಿರುದ್ದ ಮತ್ತೆ ವಾಗ್ದಾಳಿ ನಡೆಸಿದ ಮಿತ್ರಪಕ್ಷ ಕಾಶ್ಮೀರದಲ್ಲಿ ಬಿಜೆಪಿ ದುರಾಸೆ ನೀತಿಗೆ ಕ್ಷಮೆ ಇಲ್ಲ ಹಿಂಸಾಚಾರಕ್ಕೆ ಬಿಜೆಪಿ ನಿತಿಯೇ ಕಾರಣ ಎಂದ ಶಿವಸೇನೆ ಪ್ರಧಾನಿ ಮೋದಿ ಅಪಹಾಸ್ಯ ಮಾಡಿದ ಶಿವಸೇನೆ

ಮುಂಬೈ(ಜೂ.21): ಬಿಜೆಪಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಮಿತ್ರ ಪಕ್ಷ ಶಿವಸೇನೆ, ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದಂತೆ ಬಿಜೆಪಿಯ ದುರಾಸೆಯನ್ನು ಇತಿಹಾಸ ಎಂದಿಗೂ ಕ್ಷಮಿಸಲ್ಲ ಎಂದು ಹೇಳಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಮತ್ತು ಹಿಂಸಾಚಾರ ನಿಯಂತ್ರಿಸಲು ಬಿಜೆಪಿ ಸಂಪೂರ್ಣ ವಿಫಲವಾಗಿದ್ದು, ಈಗ ಪಿಡಿಪಿ ವಿರುದ್ಧ ಆರೋಪ ಮಾಡುತ್ತಿದೆ. ಇದು ಬ್ರಿಟಿಷರನ್ನು ಭಾರತದಿಂದ ಹೊರ ಹಾಕಿದಂತಿದೆ ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಆರೋಪಿಸಿದೆ.

ಪಿಡಿಪಿ ಜೊತೆ ಸೇರಿ ಅಧಿಕಾರ ಅನುಭವಿಸಿ ಕೊನೆ ಗಳಿಗೆಯಲ್ಲಿ ಜವಾಬ್ದಾರಿಯಿಂದ ನುಣುಚಿಕೊಂಡ ನಡೆ ಖಂಡಿತ ಸಹ್ಯವಲ್ಲ ಎಂದು ಶಿವಸೇನೆ ಹೇಳಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ ಸೇನೆ, ದೇಶ ಮುನ್ನಡೆಸುವುದು ಮಕ್ಕಳ ಆಟ ಅಲ್ಲ ಎಂಬುದು ಅವರಿಗೆ ಮನವರಿಕೆ ಆಗಿದ್ದರೆ ಒಳ್ಳೆಯದು ಎಂದು ಅಪಹಾಸ್ಯ ಮಾಡಿದೆ. 

ಕಣಿವೆ ರಾಜ್ಯದಲ್ಲಿ ಬಿಜೆಪಿ, ಪಿಡಿಪಿಗೆ ನೀಡಿದ್ದ ಬೆಂಬಲ ಹಿಂಪಡೆದ ಹಿನ್ನೆಲೆಯಲ್ಲಿ ಸಮಿಶ್ರ ಸರ್ಕಾರ ಪತನಗೊಂಡಿದ್ದು, ನಿನ್ನೆ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲಾಗಿದೆ. ಬಿಜೆಪಿ ಕಾಶ್ಮೀರದಲ್ಲಿ ಅರಾಜಕತೆ ಸೃಷ್ಟಿಸಿದ ನಂತರ ಅಧಿಕಾರದಿಂದ ಹೊರ ಬಂದಿದೆ ಎಂದು ಶಿವಸೇನೆ ಆರೋಪಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಖಾಲಿ ಇರುವ ವೈದ್ಯ, ಸಿಬ್ಬಂದಿ ಹುದ್ದೆ ತಿಂಗಳಲ್ಲಿ ಭರ್ತಿ: ಸಚಿವ ದಿನೇಶ್ ಗುಂಡೂರಾವ್ ಘೋಷಣೆ
3,600 ಪೊಲೀಸ್‌ ಕಾನ್‌ಸ್ಟೇಬಲ್‌ ನೇಮಕಾತಿಗೆ ಶೀಘ್ರ ಕ್ರಮ: ಗೃಹ ಸಚಿವ ಪರಮೇಶ್ವರ್‌