ಯೋಧರು ಅಹವಾಲು ಸಲ್ಲಿಸಲು ಆ್ಯಪ್‌ ಬಿಡುಗಡೆ

Published : May 11, 2017, 02:38 PM ISTUpdated : Apr 11, 2018, 12:39 PM IST
ಯೋಧರು ಅಹವಾಲು ಸಲ್ಲಿಸಲು ಆ್ಯಪ್‌ ಬಿಡುಗಡೆ

ಸಾರಾಂಶ

ಮೊಬೈಲ್ ಅಪ್ಲಿಕೇಶನ್’ಗೆ ಇಂದು ಚಾಲನೆ ನೀಡಿದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಇನ್ಮುಂದೆ ಸೆಂಟ್ರಲ್ ಆರ್ಮ್ಡ್ ಪೊಲೀಸ್ ಫೋರ್ಸ್ (ಸಿಏಪಿಎಫ್) ಸಿಬ್ಬಂದಿಗಳು ಒಂದೇ ಕ್ಲಿಕ್ಕಿನ ಮೂಲಕ ತನ್ನನ್ನು ತಲುಪಬಹುದೆಂದು ಹೇಳಿದ್ದಾರೆ.

ನವದೆಹಲಿ (ಮೇ.11): ಯೊಧರು ತಮ್ಮ ಅಹವಾಲನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ  ಕೇಂದ್ರ ಸರ್ಕಾರ ಅವರಿಗಾಗಿಯೇ ನೂತನ ಮೊಬೈಲ್ ಅಪ್ಲಿಕೇಶನನ್ನು ಬಿಡುಗಡೆ ಮಾಡಿದೆ.

ಮೊಬೈಲ್ ಅಪ್ಲಿಕೇಶನ್’ಗೆ ಇಂದು ಚಾಲನೆ ನೀಡಿದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಇನ್ಮುಂದೆ ಸೆಂಟ್ರಲ್ ಆರ್ಮ್ಡ್ ಪೊಲೀಸ್ ಫೋರ್ಸ್ (ಸಿಏಪಿಎಫ್) ಸಿಬ್ಬಂದಿಗಳು ಒಂದೇ ಕ್ಲಿಕ್ಕಿನ ಮೂಲಕ ತನ್ನನ್ನು ತಲುಪಬಹುದೆಂದು ಹೇಳಿದ್ದಾರೆ.

ಕಲ್ಲೇಟು ತಿಂದರೂ ಮತಯಂತ್ರಗಳನ್ನು ಸುರಕ್ಷಿತವಾಗಿ ಸಾಗಿಸಿದನ್ನು ನೆನಪಿಸಿಕೊಂಡ ರಾಜನಾಥ್ ಸಿಂಗ್, ಸಿಏಪಿಎಫ್ ಯೋಧರು ಕಠಿಣ ಪರಿಸ್ಥಿತಿಗಳಲ್ಲಿ ಕೆಲಸ ಮಾಡುತ್ತಾರೆ,  ಅವರ ಶಿಸ್ತು ಪ್ರಶಾಂಸಾರ್ಹವಾದುದ್ದು ಎಂದಿದ್ದಾರೆ.

ಇತ್ತೀಚೆಗೆ ಹುತಾತ್ಮ ಯೋಧರ ಕುಟುಂಬಗಳ ಶ್ರೇಯೋಭಿವೃದ್ಧಿಗೆ ಬಿಡುಗಡೆ ಮಾಡಲಾದ ‘ಭಾರತ್ ಕೆ ವೀರ್’ ಅಪ್ಲಿಕೇಶನ್’ಗೆ ಉತ್ತಮ ಪ್ರತಿಕ್ರಿಯೆ ದೊರಕಿದೆಯೆಂದು ರಾಜನಾಥ್ ಸಿಂಗ್ ಈ ಸಂದರ್ಭದಲ್ಲಿ ಹೇಳಿದ್ಧಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌