
ಚಿಕ್ಕಬಳ್ಳಾಪುರ[ಜು.06]: ಇಬ್ಬರ ರಾಜೀನಾಮೆ ಬೆನ್ನಲ್ಲೆ ಸೋಸ್ತಿ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಾಜೀನಾಮೆ ಲಿಸ್ಟ್ನಲ್ಲಿ ಮತ್ತೊಬ್ಬ ಕಾಂಗ್ರೆಸ್ ಶಾಸಕನ ಹೆಸರು ಸೇರ್ಪಡೆಯಾಗಿದ್ದು, ತಮ್ಮ ಕ್ಷೇತ್ರಕ್ಕೆ ನೀರು ಹರಿಸದಿದ್ದರೆ ರಾಜೀನಾಮೆ ನೀಡುವುದಾಗಿ ಬೆದರಿಕೆಯೊಡ್ಡಿದ್ದಾರೆ. ಅಷ್ಟಕ್ಕೂ ರಾಜೀನಾಮೆ ನೀಡಲು ಸಜ್ಜಾದ ಮೂರನೇ ಶಾಸಕ ಯಾರು?
ಕಾಂಗ್ರೆಸ್ ನಾಯಕ, ಬಾಗೇಪಲ್ಲಿ ಶಾಸಕ ಎಸ್. ಎನ್. ಸುಬ್ಬಾರೆಡ್ಡಿ ಸದ್ಯ ದೋಸ್ತಿ ಸರ್ಕಾರದ ಟೆನ್ಶನ್ ಹೆಚ್ಚಿಸಿದ್ದಾರೆ. ಎಚ್ಎನ್ ವ್ಯಾಲಿ ನೀರಿನ ವಿಚಾರದಲ್ಲಿ ಸರ್ಕಾರದ ವಿರುದ್ಧ ಸಿಡಿಮಿಡಿಗೊಂಡಿರುವ ಸುಬ್ಬಾರೆಡ್ಡಿ, ಬಾಗೇಪಲ್ಲಿಗೆ ನೀರು ಹರಿಸದಿದ್ದರೆ ರಾಜೀನಾಮೆ ನೀಡುವುದಾಗಿ ಚೇಳೂರಿನಲ್ಲಿ ನಡೆದ ಸಾರ್ವಜನಿಕ ಸಂಪರ್ಕ ಸಭೆಯಲ್ಲಿ ಗುಡುಗಿದ್ದಾರೆ.
ವೈಯಕ್ತಿಕ ಬೆಳವಣಿಗೆ, ವ್ಯವಹಾರಕ್ಕಾಗಿ ಶಾಸಕನಾಗಿಲ್ಲ, ಜನರ ಸಮಸ್ಯೆಗೆ ಸ್ಪಂದಿಸಲು ಶಾಸಕನಾಗಿದ್ದೇನೆ. ನೀರು ಬಿಡಿ, ಇಲ್ಲವಾದ್ರೆ ರಾಜೀನಾಮೆ ತೆಗೆದುಕೊಳ್ಳಿ ಎಂದಿರುವ ಕೈ ಶಾಸಕ ಕ್ಯಾಬಿನೆಟ್ ಸಭೆ ನಡೆಯಲು ಕಾಯುತ್ತಿದ್ದೇನೆ. ಒಂದು ವೇಳೆ ಈ ಸಭೆಯಲ್ಲಿ ತನ್ನ ಬೇಡಿಕೆ ಈಡೇರದಿದ್ದಲ್ಲ ರಾಜೀನಾಮೆ ನೀಡುವುದು ಖಚಿತ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.