
ನವದೆಹಲಿ(ಫೆ.13): ಓ. ಪನ್ನೀರ್ ಸೆಲ್ವಂ ಹಾಗೂ ವಿಕೆ ಶಶಿಕಲಾ ಅವರಿಗೆ ಒಂದು ವಾರದೊಳಗೆ ವಿಧಾನಸಭೆಯಲ್ಲಿ ಬಹುಮತ ಸಬೀತು ಪಡಿಸಲು ಅವಕಾಶ ನೀಡುವಂತೆ ಅಟಾರ್ನಿ ಜನರಲ್ ಮುಕುಲ್ ರೊಹಾಟ್ಗಿ ಸಲಹೆ ನೀಡಿದ್ದಾರೆ.
ವಿಧಾನಸಭೆಯ ವಿಶೇಷ ಅಧಿವೇಶನ ಕರೆದು ಬಹುಮತ ಸಾಬೀತಿಗೆ ಇಬ್ಬರಿಗೂ ಅವಕಾಶ ನೀಡಿ ಎಂದಿರುವ ಅವರು 1998ರಲ್ಲಿ ಉತ್ತರ ಪ್ರದೇಶದಲ್ಲಿ ಇದೇ ರೀತಿಯ ಪರಿಸ್ಥಿತಿ ಉಂಟಾದಾಗ ರಾಜ್ಯಪಾಲರು ಜಗದಾಂಬಿಕ ಪಾಲ್ ಹಾಗೂ ಕಲ್ಯಾಣ್ ಸಿಂಗ್ ಅವರಿಗೆ ಬಹುಮತ ಸಾಬೀತಿಗೆ ಅವಕಾಶ ನೀಡಿದ ನಿದರ್ಶನವನ್ನು ಉಲ್ಲೇಖಿಸಿದ್ದಾರೆ. ಈ ನಡುವೆಯೂ ನಾಳೆ ಬೆಳಿಗ್ಗೆ 10.30 ಕ್ಕೆ ಸುಪ್ರೀಂ ಕೋರ್ಟ್ ಶಶಿಕಲಾ ಅವರ ಅಕ್ರಮ ಆಸ್ತಿ ಪ್ರಕರಣದ ತೀರ್ಪು ಪ್ರಕಟಿಸಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.