ಪುರಸಭೆ ಕಿರುಕುಳ : ದಯಾಮರಣಕ್ಕೆ ಅರ್ಜಿ ಸಲ್ಲಿಸಿದ ಇಡೀ ಕುಟುಂಬ

Published : Nov 16, 2016, 01:32 PM ISTUpdated : Apr 11, 2018, 12:38 PM IST
ಪುರಸಭೆ ಕಿರುಕುಳ : ದಯಾಮರಣಕ್ಕೆ ಅರ್ಜಿ ಸಲ್ಲಿಸಿದ ಇಡೀ ಕುಟುಂಬ

ಸಾರಾಂಶ

ಪಟ್ಟಣದ ವಾರ್ಡ ನಂ5ರ ನಿವಾಸಿ ಬಸಪ್ಪ ತಳವಾರ ಮತ್ತು ಆತನ 6 ಜನ ಕುಟುಂಬಸ್ಥರು ಇದೀಗ ದಯಾಮರಣ ಕೋರಿ ಅರ್ಜಿ ಸಲ್ಲಿಸಿದವರು.

ಬಾಗಲಕೋಟೆ(ನ.16): ನಿಯಮ ಉಲ್ಲಂಘಿಸಿ ತಮ್ಮ ಮನೆಗೆ ಅಂಟಿಕೊಂಡೇ ಮನೆ ನಿರ್ಮಿಸುತ್ತಿರುವುದರ ವಿರುದ್ದ ಪುರಸಭೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲವೆಂದು ಆರೋಪಿಸಿ ಕುಟುಂಬವೊಂದು ದಯಾಮರಣ ಕೋರಿ ರಾಜ್ಯಪಾಲರಿಗೆ ಅರ್ಜಿ ಬರೆದಿರೋ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ವಾರ್ಡ ನಂ5ರ ನಿವಾಸಿ ಬಸಪ್ಪ ತಳವಾರ ಮತ್ತು ಆತನ 6 ಜನ ಕುಟುಂಬಸ್ಥರು ಇದೀಗ ದಯಾಮರಣ ಕೋರಿ ಅರ್ಜಿ ಸಲ್ಲಿಸಿದವರು. ಬಸಪ್ಪ ತಳವಾರ ಕಳೆದ 30 ವರ್ಷಗಳಿಂದ ಅಲ್ಲಿ ವಾಸವಿದ್ದು, ಇದೀಗ ಅವರ ಪಕ್ಕದ ಜಾಗೆಯಲ್ಲಿ ಹೊಸಗೌಡ್ರ ಕುಟುಂಬಸ್ಥರು ಮನೆ ಕಟ್ಟುವ ವೇಳೆ ತಮ್ಮ ಮನೆಯ ಜಾಗೆಯಲ್ಲಿ ನಿಯಮ ಉಲ್ಲಂಘಿಸಿ ಮನೆ ಕಟ್ಟುತ್ತಿದ್ದು, ಈ ಕುರಿತು ಪುರಸಭೆ ಅಧಿಕಾರಿಗಳಿಗೆ ಹೇಳಿದ್ರೂ ಯಾವುದೇ ಪ್ರಯೋಜನವಾಗುತ್ತಿಲ್ಲವೆಂದು ಆರೋಪಿಸಿ ಇದೀಗ ಕುಟುಂಬ ರಾಜ್ಯಪಾಲರಿಗೆ ದಯಾಮರಣ ಕೋರಿ ಅರ್ಜಿ ಸಲ್ಲಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಫೇಕ್ ನ್ಯೂಸ್ ಹರಡಿದರೇ ಐಟಿ ಸಚಿವ ಪ್ರಿಯಾಂಕ್ ಖರ್ಗೆ?: ಬಿಜೆಪಿ ಕಿಡಿ, ಬೇಷರತ್ ಕ್ಷಮೆಗೆ ಆಗ್ರಹ
ಭಾರತದಲ್ಲಿ ಮೊಳಗಿದ ಬಾಯ್ಕಾಟ್ ಥಾಯ್ಲೆಂಡ್ ಕೂಗು, ವಿಷ್ಣಮೂರ್ತಿ ಧ್ವಂಸಕ್ಕೆ ಆಕ್ರೋಶ